ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜು ಸಮೀಪ ಗಾಂಜಾ ಮತ್ತಿನಲ್ಲಿದ್ದ ಯುವಕನನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ ಅಲಿಯಾಸ್ ತಲೈವಾ (23) ಬಂಧಿತ. ಪೊಲೀಸರು ಗಸ್ತು ನಡೆಸುತ್ತಿದ್ದ ಸಂದರ್ಭ ತುಂಗಾ ಮೇಲ್ದಂಡೆ ಚಾನಲ್ ಸೇತುವೆ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದರು.
ಪ್ರವೀಣನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.