ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022
ಕರ್ಫ್ಯೂ ಸಡಿಲಗೊಳಿಸಿದ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹಳಿಗೆ ಬಂದಿದೆ. ನಗರ ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿವೆ. KSRTC ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚು ಪ್ರಯಾಣಿಕರು ಕಾಣಿಸುತ್ತಿದ್ದಾರೆ.
ಸೋಮವಾರದಿಂದ ಶಿವಮೊಗ್ಗ ನಗರ ಸಾರಿಗೆ ಬಸ್ಸುಗಳು ಸಂಚಾರ ನಿಲ್ಲಿಸಿದ್ದವು. ಇವತ್ತು ಬೆಳಗ್ಗೆಯಿಂದ ಬಸ್ ಸಂಚಾರ ಪುನಾರಂಭವಾಗಿದೆ. ನಗರದ ವಿವಿಧೆಡೆ ಬಸ್ಸುಗಳು ಸಂಚರಿಸಿದವರು. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗಾಂಧಿ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗೆ ಭೇಟಿ ನೀಡುವವರು ಈ ನಗರ ಸಾರಿಗೆ ಬಸ್ಸುಗಳನ್ನು ಅವಲಂಬಿಸಿದ್ದರು.
ಖಾಸಗಿ ಬಸ್ಸುಗಳು : ದೂರದ ಊರುಗಳಿಗೆ ತೆರಳುವ ಖಾಸಗಿ ಬಸ್ಸುಗಳಲ್ಲಿಯು ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿತ್ತು. ಕರ್ಫ್ಯೂ ಜಾರಿಯಾದ ಬಳಿಕ ಸರ್ಕಾರಿ ಉದ್ಯೋಗಿಗಳು, ವಿವಿಧ ಸಂಸ್ಥೆಯ ಉದ್ಯೋಗಿಗಳು ಮಾತ್ರ ಬಸ್ಸು ಹತ್ತುತ್ತಿದ್ದರು. ನಿಷೇಧಾಜ್ಞೆ ಸಡಿಲಗೊಂಡ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣಿಕರು ಹೆಚ್ಚಳವಾಗಿದ್ದಾರೆ.
ಸರ್ಕಾರಿ ಬಸ್ಸುಗಳು : ಇತ್ತ ಸರ್ಕಾರಿ ಬಸ್ ನಿಲ್ದಾಣದಲ್ಲಿಯು ಪ್ರಯಾಣಿಕರ ಸಂಖ್ಯೆ ಸಹಜ ಸ್ಥಿತಿಗೆ ಮರಳಿದೆ. ವಿವಿಧೆಡೆಗೆ ತೆರಳುವ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಇತ್ತು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಸಡಿಲ, ಗಾಂಧಿ ಬಜಾರ್ ಹೇಗಿದೆ? ಉಳಿದೆಡೆಯ ಸ್ಥಿತಿ ಏನು?
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






