SHIVAMOGGA LIVE NEWS | 28 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೃಷ್ಣ ಮೃಗದ ಚರ್ಮಗಳನ್ನು ಮಾರಾಟ ಮಾಡಲು ಬಂದಿದ್ದವರ ಮೇಲೆ ಅರಣ್ಯ ಸಂಚಾರಿ ದಳ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ಕೃಷ್ಣ ಮೃಗಗಳ ಎರಡು ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿಕಾರಿಪುರ ತಾಲೂಕು ಚಿಕ್ಕಮರಡಿ ತಾಂಡಾದ ಡಿಕ್ಯಾನಾಯ್ಕ (35) ಬಂಧಿತ. ಆನಂದಪುರ ಸಮೀಪದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ದಾಳಿ ನಡೆಸಲಾಗಿದೆ.
ಹೇಗಾಯ್ತು ಘಟನೆ?
ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಾಳ ಪೊಲೀಸರು ದಾಸಕೊಪ್ಪ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ್ದಾರೆ. ಎರಡು ಚೀಲಗಳನ್ನು ಹಿಡಿದು ನಿಂತುಕೊಂಡಿದ್ದ ಇಬ್ಬರು, ಪೊಲೀಸರನ್ನು ಕಂಡ ಕೂಡಲೆ ಪರಾರಿಯಾಗಲು ಯತ್ನಿಸಿದ್ದಾರೆ.
ಬೆನ್ನಟ್ಟಿದ ಪೊಲೀಸರು ಡಿಕ್ಯಾನಾಯ್ಕನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದಾನೆ. ಚೀಲಗಳನ್ನು ಪರಿಶೀಲನೆ ನಡೆಸಿದಾಗ ಕೃಷ್ಣಮೃಗದ ಎರಡು ಚರ್ಮಗಳನ್ನು ಸಿಕ್ಕಿವೆ. ಡಿಕ್ಯಾನಾಯ್ಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಬ್ಬನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.
ಜಿ.ಮಲ್ಲಿಕಾರ್ಜುನ್, ಗಣೇಶ್, ಗಿರೀಶ್, ವಿಶ್ವನಾಥ್, ಕೃಷ್ಣ, ದಿನೇಶ್, ಚೈತ್ರಾ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ| ಬೈಕ್ ಸೀಟ್ ಕೆಳಗೆ ಬುಸುಗುಡುತ್ತಿತ್ತು ನಾಗರಹಾವು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






