ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 ಫೆಬ್ರವರಿ 2022
ಒಂದು ವಾರದ ಬಳಿಕ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಿವೆ. ತಣ್ಣಗಾಗಿದ್ದ ಹಿಜಾಬ್ ವಿವಾದ ಪುನಃ ತಲೆ ಎತ್ತಿದೆ. ಹಿಜಾಬ್ ತೆಗೆಯುವಂತೆ ತಿಳಿಸಿದ್ದರಿಂದ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಿಸದೆ ಹೊರಗೆ ನಿಂತಿದ್ದಾರೆ.
ಡಿವಿಎಸ್ ಕಾಲೇಜಿನಲ್ಲಿ ಸಮವಸ್ತ್ರದೊಂದಿಗೆ ಕಾಲೇಜಿನ ಒಳಗೆ ಬರುವಂತೆ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಸಂಬಂಧ ಗೇಟ್ ಮುಂಭಾಗ ನೊಟೀಸ್ ಕೂಡ ಅಂಟಿಸಲಾಗಿದೆ. ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ಕಾಲೇಜು ಆವರಣವನ್ನು ಪ್ರವೇಶಿಸಲು ನಿರಾಕರಿಸಿದ್ದಾರೆ.
ಕಾಲೇಜು ಮುಂದೆ ನಿಂತ ವಿದ್ಯಾರ್ಥಿನಿಯರು
ಸುಮಾರು 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದ್ದಾರೆ. ತರಗತಿಗೆ ಹೋಗದೆ ಕಾಲೇಜು ಮುಂಭಾಗ ಮೌನವಾಗಿ ನಿಂತಿದ್ದಾರೆ. ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಸುವ ಪ್ರಯತ್ನವು ವಿಫಲವಾಗಿದೆ.
ಉಳಿದ ಕಾಲೇಜು ಸಹಜ ಸ್ಥಿತಿಗೆ
ಶಿವಮೊಗ್ಗ ನಗರದ ಉಳಿದ ಕಾಲೇಜುಗಳಲ್ಲಿ ಸಹಜ ಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ತರಗತಿಗಳಿಗೆ ಪ್ರವೇಶಿಸಿದ್ದು, ಪಾಠ ಕೇಳುತ್ತಿದ್ದಾರೆ.
ಹಿಜಾಬ್, ಕೇಸರಿ ಶಾಲು ಸಂಘರ್ಷ, ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಶಾಲೆ, ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆದಿರಲಿಲ್ಲ. ಕೆಲವು ಕಾಲೇಜುಗಳಲ್ಲಿ ಆನ್ ಲೈನ್ ತರಗತಿ ನಡೆಸಲಾಗಿತ್ತು. ಈಗ ಶಾಲೆ, ಕಾಲೇಜು ಪುನಾರಂಭವಾಗಿದ್ದು, ಸಣ್ಣಮಟ್ಟದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ.
ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಶಾಲೆ, ಕಾಲೇಜುಗಳ ಬಳಿಯು ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದ ಹಲವು ಕುಟುಂಬಗಳ ಅನ್ನ ಕಸಿದ ಹಿಜಾಬ್, ಕೇಸರಿ ಶಾಲು ವಿವಾದ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















