ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 ಫೆಬ್ರವರಿ 2022
ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತೀವ್ರ ಸುಟ್ಟ ಗಾಯ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದವರು.
ಮನೆಯೊಂದರ ಮುಂದೆ ಮಂಜುನಾಥ ಅವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಧಗಧಗ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆಂಬುಲೆನ್ಸ್ ಕರೆಯಿಸಿ ಮಂಜುನಾಥ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ರಾತ್ರೋರಾತ್ರಿ ಅಡಕೆ, ಬಾಳೆ ತೋಟದ ಮೇಲೆ ಆನೆಗಳ ದಾಳಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






