ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದು ಅವರು ತಿಳಿಸಿದರು.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿಕೊಂಡರು. ಪಕ್ಷದ ಪ್ರಮುಖರು, ಅಭಿಮಾನಿಗಳು, ಬೆಂಬಲಿಗರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ರಾಜಕೀಯ ಗುರಿಗಳ ಕುರಿತು ತಿಳಿಸಿದರು.
ಮಧು ಬಂಗಾರಪ್ಪ ಏನೆಲ್ಲ ಹೇಳಿದರು?
ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಹೇಳಿದಂತೆ ಸೋತು ರಾಜಕಾರಣ ಮಾಡುವುದು ಕೂಡ ಒಂದು ಪಾಠ. ಇದರ ಜೊತೆಗೆ ನಾಡಿನಲ್ಲಿ ಸಂತೋಷದ ವಾತಾವರಣ ಇರಲಿ. ಪ್ರೀತಿಯಿಂದ ಬಾಳೋಣ. ನಾನು ತೆಗೆದುಕೊಂಡ ರಾಜಕೀಯ ನಿರ್ಧಾರ ಸರಿಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೋರಾಟದ ಮೂಲಕ ಕಟ್ಟಲಾಗುವುದು. ಪಕ್ಷಕ್ಕೆ ಹೆಚ್ಚಿನ ಶಕ್ತಿ ನೀಡಲಾಗುವುದು. ಪಕ್ಷದ ಎಲ್ಲಾ ಹಿರಿಯರ ಆಶಯವೂ ಇದೇ ಆಗಿದೆ. ಅಭಿವೃದ್ಧಿಯತ್ತ ಸಾಗುವುದೇ ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರವುದು ನಮ್ಮ ಗುರಿ.
ಬಗರ್ ಹುಕುಂ ಸಮಸ್ಯೆ ತೀವ್ರವಾಗಿದೆ. ಯಾವುದೇ ಕಾರಣಕ್ಕೂ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಅವರ ಪರವಾಗಿ ಶಾಸಕನಾಗಿದ್ದಾಗಲೂ ಹೋರಾಟ ಮಾಡಿದ್ದೇನೆ. ಈಗಲೂ ಮಾಡುವೆ. ಹಂತ ಹಂತವಾಗಿ ಸೊರಬದಿಂದಲೇ ಈ ಹೋರಾಟ ಆರಂಭವಾಗಿ ಇಡೀ ರಾಜ್ಯಾದ್ಯಂತ ವಿಸ್ತಾರಗೊಳ್ಳುತ್ತದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಆರ್. ಪ್ರಸನ್ನಕುಮಾರ್, ಜೆಡಿಎಸ್ ಪ್ರಮುಖ ಎಂ.ಶ್ರೀಕಾಂತ್, ಮುಖಂಡರಾದ ಹುಲ್ತಿಕೊಪ್ಪ ಶ್ರೀಧರ್, ಬಂಡಿ ರಾಮಚಂದ್ರ, ಪಿ.ಒ.ಶಿವಕುಮಾರ್, ಶ್ವೇತಾ ಬಂಡಿ, ರಮೇಶ್ ಶಂಕರಘಟ್ಟ, ಇಕ್ಕೇರಿ ರಮೇಶ್, ಪಾರ್ವತಮ್ಮ, ಜಿ.ಡಿ. ಮಂಜುನಾಥ್, ವೈ.ಹೆಚ್. ನಾಗರಾಜ್, ಎಸ್.ಪಿ. ಶೇಷಾದ್ರಿ, ಪಲ್ಲವಿ, ವಾಸಪ್ಪಗೌಡ, ಚಿನ್ನಪ್ಪ, ರವಿ ಮೊದಲಾದವರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















