ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 ಮಾರ್ಚ್ 2022
ಶಿವಮೊಗ್ಗದ ಮಹಾದೇವಿ ಟಾಕೀಸ್ ಮುಂಭಾಗ ಸೆಕ್ಯೂರಿಟಿ ಗಾರ್ಡ್ ಒಬ್ಬರ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ.
ಮಣಿ (68) ಎಂಬವವರು ಹಲ್ಲೆಗೊಳಗಾದವರು. ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳವಿದೆ. ಅದರ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಏನಿದು ಘಟನೆ?
ಫೆ.28ರ ನಡುರಾತ್ರಿ ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳಕ್ಕೆ ವ್ಯಕ್ತಿಯೊಬ್ಬ ಬಂದಿದ್ದಾನೆ. ತನ್ನನ್ನು ಹೊಸಮನೆಯ ಚಂದ್ರು ಎಂದು ಪರಿಚಯಿಸಿಕೊಂಡಿದ್ದಾನೆ. ತಾನು ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಬೇಕು. ಸ್ವಲ್ಪ ಹೊತ್ತು ಇಲ್ಲಿ ಮಲಗುತ್ತೇನೆ ಎಂದು ತಿಳಿಸಿದ್ದಾನೆ. ಸೆಕ್ಯೂರಿಟಿ ಮಣಿ ಅವರು ಇದಕ್ಕೆ ಒಪ್ಪದಿದ್ದಾಗ ಕಲ್ಲಿನಿಂದ ಹೊಡೆದು ಓಡಿ ಹೋಗಿದ್ದಾನೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






