ಗಾಜನೂರಿನಲ್ಲಿ ಪೊಲೀಸರ ದಾಳಿ, ಆರು ಮಂದಿ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 ಮಾರ್ಚ್ 2022

ಅಂದರ್ ಬಾಹರ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಗಾಜನೂರು ಮೊರಾರ್ಜಿ ವಸತಿ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಜನರು ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿದ್ದರು. ಇದರ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಖಾಕಿ ಕಂಡು ಕಾಲ್ಕಿತ್ತರು

ಪೊಲೀಸರು ದಾಳಿ ನಡೆಸುತ್ತಿದ್ದಂತೆ ಜೂಜಾಟದಲ್ಲಿ ತೊಡಗಿದ್ದ ಆರು ಮಂದಿ ಪರಾರಿಯಾಗಿದ್ದಾರೆ. ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದುಕೊಂಡಿದ್ದಾರೆ. ಅವರನ್ನು ಪ್ರಕಾಶ್ ಮತ್ತು ಶರತ್ ಎಂದು ಗುರುತಿಸಲಾಗಿದೆ. ಇನ್ನು, ಪರಾರಿಯಾದ ಪಾಪಣ್ಣ, ಸಂದೀಪ, ಮನು, ಪ್ರಸನ್ನ ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಹಣ, ಇಸ್ಪೀಟ್ ಕಾರ್ಡ್ ಸೀಜ್

ಅಂದರ್, ಬಾಹರ್ ಆಟದಲ್ಲಿ ತೊಡಗಿಸಿದ್ದ 19,240 ರೂ. ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್ಐ ಶಿವಪ್ರಸಾದ್, ಸಿಬ್ಬಂದಿ ರಾಜು, ಸಂತೋಷ್, ಜಿಲಾನಿ, ಸಂತೋಷ್, ಚೇತನ್, ಶರತ್ಚಂದ್ರ, ಅರಿಹಂತ ಶಿರಹಟ್ಟಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment