ವರ್ಷ ಕಳೆದರೂ ಬದಲಾಗದ ನಾಮಫಲಕ, ಇರುವಕ್ಕಿಯಲ್ಲಿ ಸ್ಥಳೀಯರಿಂದ ರಸ್ತೆ ತಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 ಮಾರ್ಚ್ 2022

ಸಾಗರದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ನಾಮಫಲಕ ಬದಲಾವಣೆಗೆ ಆಗ್ರಹಿಸಿ, ಸ್ಥಳೀಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

Shimoga Nanjappa Hospital

ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಅರಸ ಶಿವಪ್ಪನಾಯಕ ಅವರ ಹೆಸರು ಇಡಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಈ ಹೆಸರು ಘೋಷಣೆಯಾಗಿತ್ತು. ಒಂದು ವರ್ಷ ಕಳೆದರೂ ನಾಮಫಲಕ ಅಳವಡಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನು, ಸ್ಥಳೀಯರಿಗೆ ಉದ್ಯೋಗ ಕೊಡುವುದಾಗಿ ಯಡಿಯೂರಪ್ಪ ಅವರು ಹೇಳಿದ್ದರು. ಆದರೆ ಕೃಷಿ ವಿವಿ ಅಧಿಕಾರಿಗಳು ತಮಗೆ ಬೇಕಾದವರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಮತ್ತು ತೋಟಗಾರಿಗೆ ವಿವಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೆಲ ಹೊತ್ತು ರೆಸ್ತೆ ತಡೆ ನಡೆಸಿದರು. ವಿವಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹೊಸ ನಾಮಫಲಕ ಅಳವಡಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.

ಪ್ರಮುಖರಾದ ಶಾಂತಪ್ಪಗೌಡ, ರವಿಕುಮಾರ್ ಎಸ್.ಯಡೆಹಳ್ಳಿ, ರೇವಪ್ಪ ಹೊಸಕೊಪ್ಪ, ದೇವು ಬೀಸನಗದ್ದೆ, ಪ್ರಮೋದ ಶ್ರೀನಿವಾಸ್, ಹೇಮರಾಜ್ ಮೆಣಸಿನಸರ, ಅರುಣ್ ಗೌಡ, ವೀಣಾ ರಾಜೇಶ್, ಪ್ರವೀಣ್, ಸೃಜನ್ ಹೊಸಕೊಪ್ಪ, ನವೀನ್, ಸುಶಾಂತ್, ಪ್ರಸನ್ನ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment