ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 ಮಾರ್ಚ್ 2022
ಸಾಗರದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ನಾಮಫಲಕ ಬದಲಾವಣೆಗೆ ಆಗ್ರಹಿಸಿ, ಸ್ಥಳೀಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಅರಸ ಶಿವಪ್ಪನಾಯಕ ಅವರ ಹೆಸರು ಇಡಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಈ ಹೆಸರು ಘೋಷಣೆಯಾಗಿತ್ತು. ಒಂದು ವರ್ಷ ಕಳೆದರೂ ನಾಮಫಲಕ ಅಳವಡಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇನ್ನು, ಸ್ಥಳೀಯರಿಗೆ ಉದ್ಯೋಗ ಕೊಡುವುದಾಗಿ ಯಡಿಯೂರಪ್ಪ ಅವರು ಹೇಳಿದ್ದರು. ಆದರೆ ಕೃಷಿ ವಿವಿ ಅಧಿಕಾರಿಗಳು ತಮಗೆ ಬೇಕಾದವರಿಗೆ ಉದ್ಯೋಗ ನೀಡುತ್ತಿದ್ದಾರೆ ಎಂದ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಮತ್ತು ತೋಟಗಾರಿಗೆ ವಿವಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೆಲ ಹೊತ್ತು ರೆಸ್ತೆ ತಡೆ ನಡೆಸಿದರು. ವಿವಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹೊಸ ನಾಮಫಲಕ ಅಳವಡಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಪ್ರಮುಖರಾದ ಶಾಂತಪ್ಪಗೌಡ, ರವಿಕುಮಾರ್ ಎಸ್.ಯಡೆಹಳ್ಳಿ, ರೇವಪ್ಪ ಹೊಸಕೊಪ್ಪ, ದೇವು ಬೀಸನಗದ್ದೆ, ಪ್ರಮೋದ ಶ್ರೀನಿವಾಸ್, ಹೇಮರಾಜ್ ಮೆಣಸಿನಸರ, ಅರುಣ್ ಗೌಡ, ವೀಣಾ ರಾಜೇಶ್, ಪ್ರವೀಣ್, ಸೃಜನ್ ಹೊಸಕೊಪ್ಪ, ನವೀನ್, ಸುಶಾಂತ್, ಪ್ರಸನ್ನ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






