ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 ಮಾರ್ಚ್ 2022
ಹೊಟ್ಟೆ ಬಿರಿಯುವ ಹಾಗೆ ಮಾಂಸದೂಟ ಮಾಡಿ ಯುವಕರ ಗುಂಪು ಬಿಲ್ ಕೇಳಿದಾಗ ಜಗಳ ಶುರು ಮಾಡಿ ಹೊಟೇಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಡುಗೆ ಭಟ್ಟನ ಮುಖದ ಮೇಲೆ ಬಾಣೆಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಎರಚಿದ್ದಾರೆ.
ಭದ್ರಾವತಿಯ ಜನ್ನಾಪುರದಲ್ಲಿ ಘಟನೆ ಸಂಭವಿಸಿದೆ. ಮಿಲ್ಟ್ರಿ ಹೊಟೇಲ್ ಒಂದರಲ್ಲಿ ಹೊಟ್ಟೆ ಬಿರಿಯುವ ಹಾಗೆ ಮಾಂಸದ ಊಟ ಮಾಡಿದ ಯುವಕರ ಗುಂಪು, ಬಿಲ್ ಕೇಳಿದಾಗ ಗಲಾಟೆ ಶುರು ಮಾಡಿದ್ದಾರೆ.
ಮಾಲೀಕನ ಮೇಲೆ ಹಲ್ಲೆ
ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ನಲ್ಲಿರುವ ಮಿಲ್ಟ್ರಿ ಹೊಟೇಲ್ ಒಂದರಲ್ಲಿ ಘಟನೆ ಸಂಭವಿಸಿದೆ. ಬಿಲ್ ಕೇಳಿದ ಹೊಟೇಲ್ ಕೆಲಸಗಾರ ಸುರೇಶ್ ಮೇಲೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಮಧ್ಯ ಪ್ರವೇಶ ಮಾಡಿದ ಹೊಟೇಲ್ ಮಾಲೀಕ ಲೋಹಿತ್ ಕುಮಾರ್’ಗೂ ಯುವಕರು ಥಳಿಸಿದ್ದಾರೆ.
ಭಟ್ಟನ ಮುಖಕ್ಕೆ ಬಿಸಿ ಎಣ್ಣೆ
ಗಲಾಟೆ ಬಿಡಿಸಲು ಹೋದ ಅಡುಗೆ ಭಟ್ಟನಿಗೂ ಯುವಕರ ಗುಂಪು ಥಳಿಸಿದೆ. ಬಾಣಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಅಡುಗೆ ಭಟ್ಟ ಮನೋಜ್ ಕುಮಾರ್ ಮುಖದ ಮೇಲೆ ಎರಚಲಾಗಿದೆ. ಕಣ್ಣು ಸೇರಿದಂತೆ ಹಲವು ಭಾಗಕ್ಕೆ ಹಾನಿಯಾಗಿದೆ. ಮನೋಜ್ ಕುಮಾರ್’ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗ್ಲಾಸ್ ಪೀಸ್ ಪೀಸ್
ಹೊಟೇಲ್’ನಿಂದ ಹೊರಗೆ ಬಂದ ಯುವಕರ ಗುಂಪು, ಕಲ್ಲು ತೂರಾಟ ಮಾಡಿದೆ. ಹೊಟೇಲ್’ನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವಕರು ಗುಂಪು ಹೊಟೇಲ್ ಗಾಜುಗಳನ್ನು ಪುಡಿಗಟ್ಟುವ ವಿಡಿಯೋ ವೈರಲ್ ಆಗಿದೆ.
ಘಟನೆ ಸಂಬಂಧ ಮೂವರನ್ನು ಬಂಧಸಲಾಗಿದೆ. ಉಳಿದವರಿಗೆ ಶೋಧ ಕಾರ್ಯ ನಡೆಯುತ್ತಿದೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಚಿನ್ನಾಭರಣ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಹುದ್ದೆಗಳಿಗೆ ನೇರ ಸಂದರ್ಶನ, ಯಾವಾಗ? ಎಷ್ಟಿರಲಿದೆ ಸಂಬಳ?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಇಲ್ಲಿದೆ ಇಂದಿನ ಹವಾಮಾನ ವರದಿ

- ಶಿವಮೊಗ್ಗದಿಂದ ತರೀಕೆರೆಗೆ ಹೋಗಲು ಬಸ್ ಹತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





