ಕೋಟೆ ಮಾರಿಕಾಂಬ ಜಾತ್ರೆ ಮಳಿಗೆ ಹಂಚಿಕೆ ವಿವಾದ, ಟೆಂಡರ್ ಪಡೆದಿದ್ದವನಿಗೆ ಜೀವ ಬೆದರಿಕೆಯ ಆರೋಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 ಮಾರ್ಚ್ 2022

ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಮಳಿಗೆ ಹಂಚಿಕೆ ಸಂಬಂಧ ವಿವಾದ ಸೃಷ್ಟಿಯಾಗಿದೆ. ಮಳಿಗೆಗಳ ಟೆಂಡರ್ ಪಡೆದಿದ್ದ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಆರೋಪವು ಕೇಳಿ ಬಂದಿದೆ. ಅನ್ಯ ಧರ್ಮಿಯರಿಗೆ ಮಳಿಗೆ ಕೊಡಬಾರದು ಎಂದು ಹಿಂದೂ ಸಂಘಟನೆಗಳ ಮುಖಂಡರು ಪಟ್ಟು ಹಿಡಿದಿದ್ದಾರೆ.

Shimoga Nanjappa Hospital

ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಶಿವಮೊಗ್ಗ ನಗರದ ಊರ ಹಬ್ಬ ಎಂದು ಖ್ಯಾತಿ ಪಡೆದಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಕೊರೋನ ಹಿನ್ನೆಲೆ ಈ ಭಾರಿ ನಿಗದಿಗಿಂತಲೂ ಒಂದು ತಿಂಗಳು ತಡವಾಗಿ ಜಾತ್ರೆ ನಡೆಸಲಾಗುತ್ತಿದೆ. ಈ ನಡುವೆ ಮಳಿಗೆ ಹಂಚಿಕೆ ವಿವಾದ ಸೃಷ್ಟಿಯಾಗಿದೆ.

ಏನಿದು ವಿವಾದ?

ಜಾತ್ರೆ ಸಂದರ್ಭ ಮಾರಿಕಾಂಬ ದೇವಿ ದೇವಸ್ಥಾನದ ಸುತ್ತಲು ತಿನಿಸು, ಆಟಿಕೆ, ಅಲಂಕಾರಿಕ ವಸ್ತುಗಳು, ಹೂವು, ಹಣ್ಣು, ಕಾಯಿ ಸೇರಿದಂತೆ ವಿವಿಧ ಮಾರಾಟ ಮಳಿಗೆ ಇರಿಸಲಾಗುತ್ತದೆ. ಈವರೆಗೂ ಸರ್ವ ಧರ್ಮಿಯರು ಮಳಿಗೆಗಳನ್ನು ಇರಿಸುತ್ತಿದ್ದರು. ಈ ಭಾರಿ ಹಿಂದೂ ಧರ್ಮಿಯರು ಮಾತ್ರ ಮಳಿಗೆ ಇರಿಸಲು ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಇದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

‘ನಮಗೂ ಇದಕ್ಕೂ ಸಂಬಂಧವಿಲ್ಲ’

ಇನ್ನು, ಜಾತ್ರೆ ಹೊಸ್ತಿಲಲ್ಲಿ ವಿವಾದ ಹುಟ್ಟಿಕೊಂಡಿದ್ದರಿಂದ ಎಚ್ಚೆತ್ತುಕೊಂಡ ಕೋಟೆ ಶ್ರೀ ಮಾರಿಕಾಂಬ ದೇವಿ ಸಮಿತಿ ಪತ್ರಿಕಾಗೋಷ್ಠಿ ಕರೆದು, ತಮಗೂ ವಿವಾದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

‘ಮಳಿಗೆ ಹರಾಜು ಸಂಬಂಧ ನಾಗರಾಜು ಎಂಬವವರು ಟೆಂಡರ್ ಪಡೆದಿದ್ದಾರೆ. 9.01 ಲಕ್ಷ ರೂ.ಗೆ ಟೆಂಡರ್ ನೀಡಿದ್ದೇವೆ. ಅವರು ಮಳಿಗೆಗಳನ್ನ ಯಾರಿಗೆ ಬೇಕಿದ್ದರೂ ಕೊಡಬಹುದು. ಇದಕ್ಕೂ ದೇವಸ್ಥಾನದ ಆಡಳಿತ ಮತ್ತು ಜಾತ್ರೆ ಸಮಿತಿಗೂ ಸಂಬಂಧವಿಲ್ಲ’ ಎಂದು ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ ತಿಳಿಸಿದರು.

‘ಜೀವ ಬೆದರಿಕೆ ಒಡ್ಡಿದ್ದಾರೆ’

ಇನ್ನು, ಟೆಂಡರ್ ವಿಚಾರವಾಗಿ ಜೀವ ಬೆದರಿಕೆ ಒಡ್ಡಿರುವ ಆರೋಪವು ಕೇಳಿ ಬಂದಿದೆ. ‘ಈ ಮೊದಲು ಚಿಕ್ಕ ಎಂಬುವವರು ಟೆಂಡರ್ ಪಡೆದಿದ್ದರು. ಅವರಿಗೆ ಕೆಲವರು ಜೀವ ಬೆದರಿಕೆ ಒಡ್ಡಿದ್ದರಿಂದ ಟೆಂಡರ್ ಹಿಂತಿರುಗಿಸಿದ್ದಾರೆ. ಆಮೇಲೆ ನಾಗರಾಜು ಎಂಬುವವರು ಬಂದು ಟೆಂಡರ್ ಪಡೆದುಕೊಂಡಿದ್ದಾರೆ’ ಎಂದು ಎಸ್.ಕೆ.ಮರಿಯಪ್ಪ ಅವರು ತಿಳಿಸಿದ್ದಾರೆ.

marikamba jathre in Shimoga

ದೇಗುಲದ ಸುತ್ತಮುತ್ತ ಅಂಗಡಿಗಳಿಲ್ಲ

ಈ ಭಾರಿ ಕೋಟೆ ಮಾರಿಕಾಂಬ ದೇವಿ ದೇವಸ್ಥಾನದ ಸುತ್ತಮತ್ತ ಮಳಿಗೆ ಹಾಕಲು ಅವಕಾಶವಿಲ್ಲ. ಪೊಲೀಸ್ ಇಲಾಖೆ ಸೂಚನೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ‘ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊಳೆ ಬಸ್ ಸ್ಟಾಪ್’ಗೆ ತೆರಳುವ ರಸ್ತೆ, ಎಸ್.ಪಿ. ರಸ್ತೆ, ದೇವಸ್ಥಾನದ ಹಿಂಭಾಗ ಕೃಷ್ಣ ಕೆಫೆಗೆ ಹೋಗುವ ರಸ್ತೆಯಲ್ಲಿ ಮಳಿಗೆಗಳನ್ನು ಹಾಕಲು ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ಸಮೀಪ ಮಳಿಗೆ ಹಾಕದಂತೆ ಷರತ್ತು ವಿಧಿಸಲಾಗಿದೆ’ ಎಂದು ಎಸ್.ಕೆ.ಮರಿಯಪ್ಪ ಸ್ಪಷ್ಟಪಡಿಸಿದರು.

ಪರ, ವಿರೋಧದ ಚರ್ಚೆ

ಇನ್ನು, ಮಾರಿಕಾಂಬ ಜಾತ್ರೆಯಲ್ಲಿ ಹಿಂದೂ ಧರ್ಮಿಯರ ಅಂಗಡಿಗಳಿಗೆ ಮಾತ್ರ ಅವಕಾಶ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್ ಆಗಿದೆ. ಇದರ ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದೆ. ಈ ನಡುವೆ ಮರಿಕಾಂಬ ಜಾತ್ರೆ ಅಂಗವಾಗಿ ಸರ್ವ ಧರ್ಮಿಯರಿಗೂ ಲಷ್ಕರ್ ಮೊಹಲ್ಲಾದಲ್ಲಿ ಅಂಗಡಿ ಹಾಕಲು ಅವಕಾಶ ನೀಡಲಾಗುತ್ತದೆ ಎಂಬ ಪೋಸ್ಟರ್ ವೈರಲ್ ಆಗಿದೆ.

JNNCE College VTU Exam

‘ಸರ್ವ ಧರ್ಮಿಯರಿಂದ ಆರಾಧನೆ’

ಪ್ರಸಿದ್ಧ ಕೋಟೆ ಮಾರಿಕಾಂಬ ದೇವಿ ದೇವಸ್ಥಾನಕ್ಕೆ ಶಿವಮೊಗ್ಗದ ಸರ್ವ ಧರ್ಮಿಯರು ನಡೆದುಕೊಳ್ಳುತ್ತಾರೆ. ‘ದೇವಸ್ಥಾನಕ್ಕೆ ಮುಸ್ಲಿಂ ಸಮುದಾಯದವರು ನಡೆದುಕೊಳ್ಳುತ್ತಾರೆ. ಜಾತ್ರೆಯ ಸಿದ್ಧತೆಯ ಹಲವು ಕೆಲಸಗಳಲ್ಲಿ ಅವರು ತೊಡಗಿಸಿಕೊಳ್ಳುತ್ತಾರೆ. ಕ್ರೈಸ್ತ ಸಮುದಾಯದ ನಿಯೋಗ ದೇವಸ್ಥಾನಕ್ಕೆ ಭೇಟಿ ನೀಡಿತ್ತು. ವಾಹನಗಳ ಪಾರ್ಕಿಂಗ್’ಗೆ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದಾರೆ. ಆದರೆ ಕೆಲವರು ಗೊಂದಲ ಸೃಷ್ಟಿ ಮಾಡಿದ್ದಾರೆ. ಜಾತ್ರೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬಹುದು, ಎಲ್ಲರೂ ದೇವಿಯ ಪೂಜೆ ಮಾಡಬಹುದು’ ಎಂದು ಮಾರಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ ಸಷ್ಟಪಡಿಸಿದ್ದಾರೆ.

ವದಂತಿಗೆ ಕವಿಗೊಡಬೇಡಿ

ಊರ ಜಾತ್ರೆಯನ್ನು ಎಲ್ಲರೂ ಖುಷಿಯಿಂದ ಮಾಡಬೇಕು. ಯಾವುದೆ ವದಂತಿಗೂ ಕವಿಗೊಡಬೇಡಿ ಎಂದು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಎನ್.ಮಂಜುನಾಥ್ ಮನವಿ ಮಾಡಿದ್ದಾರೆ.

ಈ ನಡುವೆ ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಕೊನೆಯ ಹಂತದ ಸಿದ್ಧತೆಗಳು ನಡೆಯುತ್ತಿವೆ. ಮಾರ್ಚ್ 22ರಿಂದ ಜಾತ್ರೆ ನಡೆಯಲಿದೆ. ಹಿಂದಿನ ಹಾಗೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಇರಲಿವೆ.

ಇದನ್ನೂ ಓದಿ | ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಸಿದ್ಧತೆ, ಹೇಗಿದೆ ಈ ಭಾರಿ ಉತ್ಸವ? ಇಲ್ಲಿದೆ ಟಾಪ್ 10 ಪಾಯಿಂಟ್

Marikamba Jathre

Marikamba Jathre

Marikamba Jathre

Marikamba Jathre

Marikamba Jathre

Marikamba Jathre

Marikamba Jathre

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU eXam

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment