ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 ಮಾರ್ಚ್ 2022
ಬೊಲೇರೋ ಗೂಡ್ಸ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ.
ಭದ್ರಾವತಿ ತಾಲೂಕು ಬಸವನಗುಡಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೊಲೇರೋ ಗೂಡ್ಸ್ ವಾಹನದ ಚಾಲಕ ನೂರ್ ಅಹಮ್ಮದ್ (44) ಮೃತಪಟ್ಟಿದ್ದಾರೆ.
ಹೇಗಾಯ್ತು ಅಪಘಾತ?
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಗಡಿ ರಂಗಾಪುರ, ಕಾಳೇನಹಳ್ಳಿಯ ನಿವಾಸಿಗಳು ಶಿವಮೊಗ್ಗಕ್ಕೆ ಬಂದು ಹಿಂತಿರುಗುತ್ತಿದ್ದರು. ಶನಿವಾರ ರಾತ್ರಿ 8.20ರ ಹೊತ್ತಿಗೆ ತಮ್ಮೂರಿಗೆ ಮರಳುತ್ತಿದ್ದರು. ಭದ್ರಾವತಿಯ ಬಸವನಗುಡಿ ಗ್ರಾಮದ ಸಂದ್ಯಾದೀಪ ವೃದ್ಧಾಶ್ರಮದ ಮುಂದೆ ಅಪಘಾತ ಸಂಭವಿಸಿದೆ.
ಅಂತರಗಂಗೆ ಕಡೆಯಿಂದ ಬಂದ ಬೊಲೇರೋ ಪಿಕಪ್ ವಾಹನ ಅಜ್ಜಂಪುರ ಕಡೆಗೆ ತೆರಳುತ್ತಿದ್ದ ಬೊಲೋರೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅಜ್ಜಂಪುರ ಕಡೆಗೆ ತೆರಳುತ್ತಿದ್ದ ಬೊಲೇರೋ ಪಿಕಪ್ ವಾಹನದ ಚಾಲಕ ನೂರ್ ಅಹಮ್ಮದ್ ಅವರಿಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಗಡಿರಂಗಾಪುರದ ಗಂಗಾಧರ, ಮಂಜಪ್ಪ, ಜನಪ್ಪ, ತಿಮ್ಮೇಶ, ಕಾಳೇನಹಳ್ಳಿಯ ತೌಫಿಕ್ ಎಂಬುವವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















