ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 ಏಪ್ರಿಲ್ 2022
ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ಆರೋಪ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದು, ಪ್ರಕರಣ ಪೊಲೀಸ್ ಠಾಣೆವರೆಗೂ ತಲುಪಿ ರಾಜಿಯಾಗಿದೆ ಎಂದು ತಿಳಿದು ಬಂದಿದೆ.
ಹೊಸನಗರ ತಾಲೂಕಿನ ಪ್ರಥಮ ದರ್ಜೆ ಕಾಲೇಜೊಂದರಲ್ಲಿ ಘಟನೆ ಸಂಭವಿಸಿದೆ. ಬಿ.ಎ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಘಟನೆ ಸಂಭವಿಸಿದೆ.
ಘಟನೆ ಸಂಭವಿಸಿದ್ದು ಹೇಗೆ?
ಪರೀಕ್ಷೆ ಸಂದರ್ಭ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನು ಗಮನಿಸಿದ ಉಪನ್ಯಾಸಕ ವಿದ್ಯಾರ್ಥಿಗೆ ಬೈದು ಬುದ್ದಿ ಹೇಳಿದ್ದಾರೆ. ನಕಲು ಮಾಡಲು ಬಳಕೆ ಮಾಡಿದ್ದ ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಈ ಸಂದರ್ಭ ವಿದ್ಯಾರ್ಥಿ ಮತ್ತು ಉಪನ್ಯಾಸಕನ ನಡುವೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ರಾಜಿಯಾಯ್ತು ಪ್ರಕರಣ
ಘಟನೆ ಸಂಬಂಧ ದೂರು, ಪ್ರತಿ ದೂರು ನೀಡಲು ಸಿದ್ಧತೆಯಾಗಿತ್ತು. ಆದರೆ ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಪ್ರಕರಣ ರಾಜಿಯಾಗಿದೆ ಎಂದು ತಿಳಿದು ಬಂದಿದೆ. ಈ ನಡುವೆ ವಿದ್ಯಾರ್ಥಿಗೆ ಉಪನ್ಯಾಸಕ ಕೈ ಕಚ್ಚಿರುವ ವಿಚಾರ ಮತ್ತು ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















