SHIVAMOGGA LIVE NEWS | 5 ಏಪ್ರಿಲ್ 2022
ಅಡಕೆ ತೋಟಕ್ಕೆ ನುಗ್ಗಿದ್ದ ಕಾಡುಕೋಣ ಓಡಿಸಲು ಹೋಗಿದ್ದ ರೈತನ ಮೇಲೆ ದಾಳಿಯಾಗಿದೆ. ಗಂಭೀರ ಗಾಯಗೊಂಡಿರುವ ರೈತನನ್ನು ಕೂಡಲೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಕಾಡುಕೋಣ ತಿವಿದು ಅಸಿಮನೆ ರಾಘವೇಂದ್ರ ಎಂಬ ರೈತ ಗಂಭೀರ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಆರು ಗಂಟೆ ಹೊತ್ತಿಗೆ ರಾಘವೇಂದ್ರ ತಮ್ಮ ಮನೆ ಮುಂದಿರುವ ಅಡಕೆ ತೋಟಕ್ಕೆ ಬಂದಿದ್ದ ಕಾಡುಕೋಣವನ್ನು ಓಡಿಸಲು ಪತ್ನಿ ಜೊತೆ ಹೋಗಿದ್ದರು.
ಆ ಸಂದರ್ಭ ಕಾಡುಕೋಣ ರಾಘವೇಂದ್ರ ಅವರ ಮೇಲೆ ದಾಳಿ ನಡೆಸಿ ಕೊಂಬಿನಿಂದ ತಿವಿದಿದೆ. ರಾಘವೇಂದ್ರ ಅವರ ಹೊಟ್ಟೆಗೆ ಗಂಭೀರ ಗಾಯವಾಗಿದೆ. ಇದನ್ನು ಕಂಡ ರಾಘವೇಂದ್ರ ಪತ್ನಿ ಪ್ರಜ್ಞೆತಪ್ಪಿ ಬಿದ್ದಿದ್ದರು. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಮಾಜಿ ಅಧ್ಯಕ್ಷ ಹಸಿರುಮನೆ ನಂದನ್ ಅವರು ರೈತನನ್ನು ತಮ್ಮ ಕಾರಿನಲ್ಲಿ ಮುಖ್ಯರಸ್ತೆಗೆ ಕರೆತಂದಿದ್ದು ಬಳಿಕ 108 ವಾಹನಕ್ಕೆ ಕರೆ ಮಾಡಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೇಗರವಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200