‘ನಂದಿತಾ ಕೇಸಿನಲ್ಲೂ ಹೀಗೆ ಮಾಡಿದ್ದರು, ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ರಾಜೀನಾಮೆ ಕೊಡಲಿ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | POLITICS NEWS | 7 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿಯ ಗೌರವ ಉಳಿಸುವುದಕ್ಕಾದರೂ ಆರಗ ಜ್ಞಾನೇಂದ್ರ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಗೃಹ ಸಚಿವರು ಕಾನೂನು ಕಾಪಾಡಬೇಕು. ಆದರೆ ಅವರೆ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ತೀರ್ಥಹಳ್ಳಿಗೆ ಕಳಂಕ ತರುತ್ತಿದ್ದಾರೆ

ತೀರ್ಥಹಳ್ಳಿ ತಾಲೂಕಿನವರಿಗೆ ಎರಡು ಜ್ಞಾನಪೀಠ ಪ್ರಶಸ್ತಿ ಬಂದಿದೆ. 1952ರಿಂದ ಈಚೆಗೆ ಪ್ರತಿ ಸದನದಲ್ಲಿಯು ಶಾಂತವೇರಿ ಗೋಪಾಲಗೌಡ ಅವರ ಪ್ರಸ್ತಾಪವಾಗುತ್ತದೆ. ಆದರೆ ಆರಗ ಜ್ಞಾನೇಂದ್ರ ಅವರು ಇಂತಹ ಕ್ಷೇತ್ರದ ಗೌರವ ಉಳಿಸುವುದಕ್ಕಾದರೂ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.

ನಂದಿತಾ ಕೇಸಿನಲ್ಲೂ ಹೀಗೆ ಮಾಡಿದರು

ತೀರ್ಥಹಳ್ಳಿಯ ನಂದಿತಾ ಪ್ರಕರಣದಲ್ಲಿಯು ಕೂಡ ಇದೆ ರೀತಿ ಮಾಡಿದ್ದರು ಎಂದು ಕಿಮ್ಮನೆ ರತ್ನಾಕರ್ ಅವರು ಆರೋಪಿಸಿದರು. ಆ ಪ್ರಕರಣದಲ್ಲಿ ಕೋಮು ಗಲಭೆ ಸೃಷ್ಟಿ ಮಾಡಿದರು. ಇಬ್ಬರು ಯುವಕರು ಉರ್ದು ಮಾತನಾಡಿದರು ಎಂದು ಹಬ್ಬಿಸಿದರು. ಈಗಲೂ ಅದೇ ಮಾದರಿಯ ಕೋಮು ಭಾವನೆ ಕೆರಳಿಸುತ್ತಿದ್ದಾರೆ ಎಂದರು.

ದೇಶದ್ರೋಹದ ಪ್ರಕರಣ ದಾಖಲಿಸಬೇಕು

ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಕೋಮು ಗಲಭೆ ತಡೆಯಲು ಇದ್ದಾರೋ, ಗಲಭೆ ಸೃಷ್ಟಿಸಲು ಇದ್ದಾರೋ ಸ್ಪಷ್ಟಪಡಿಸಬೇಕು. ಚಂದ್ರು ಹತ್ಯೆ ಪ್ರಕರಣ ಸಂಬಂಧ ಅವರ ಹೇಳಿಕೆ ಹಿನ್ನೆಲೆ ಗೃಹ ಸಚಿವರ ವಿರುದ್ಧೆ ದೇಶ ದ್ರೋಹದ ಪ್ರಕರಣ ದಾಖಲು ಮಾಡಬೇಕು. ಸಿ.ಟಿ.ರವಿ ಅವರ ವಿರುದ್ಧವು ಪ್ರಕರಣ ದಾಖಲು ಮಾಡಬೇಕು. ಇನ್ನು, ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ಸಚಿವ ಈಶ್ವರಪ್ಪ ವಿರುದ್ಧವು ಕೇಸ್ ದಾಖಲಿಸಬೇಕು ಎಂದು ಕಿಮ್ಮನೆ ರತ್ನಾಕರ್ ಅವರು ಆಗ್ರಹಿಸಿದರು.

ಪೊಲೀಸರ ಹಾದಿ ತಪ್ಪಿಸುತ್ತಿದ್ದಾರೆ

ಪೊಲೀಸರು ಗೃಹ ಸಚಿವರ ಹಾದಿ ತಪ್ಪಿಸುತ್ತಿದ್ದಾರೆ ಅನ್ನುವುದು ಸುಳ್ಳು. ಗೃಹ ಸಚಿವರೆ ಪೊಲೀಸರ ದಿಕ್ಕು ತಪ್ಪಿಸುತ್ತಿದ್ದಾರೆ. ನಂದಿತಾ ಪ್ರಕರಣದಲ್ಲಿ ಕಾರಿನಲ್ಲಿ ಬಂದವರು ಉರ್ದು ಮಾತನಾಡುತ್ತಿದ್ದರು ಎಂದು ಹೇಳಿಕೆ ನೀಡಿದ್ದರು. ಈಗಲು ಅದೆ ರೀತಿಯ ಹೇಳಿಕೆ ನೀಡಿದ್ದಾರೆ. ನಂದಿತಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೇಳುತ್ತಿದ್ದರು. ಈಗ ಅವರದ್ದೇ ಸರ್ಕಾರವಿದೆ. ಅವರ ಗೃಹ ಸಚಿವರು ಈಗೇಕೆ ಸಿಬಿಐಗೆ ಒಪ್ಪಿಸುತ್ತಿಲ್ಲ ಎಂದು ಕಿಮ್ಮನೆ ರತ್ನಾಕರ್ ಅವರು ಪ್ರಶ್ನಿಸಿದರು.

POLITICS NEWS

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment