SHIVAMOGGA LIVE NEWS | Politics News | 7 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಆರೋಪಿಯೊಬ್ಬ ಬಿಜೆಪಿ ಕಾರ್ಯಕರ್ತನಾಗಿದ್ದರೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಚೌ ಚೌ ಬಾತ್, ಟೀ ತರಿಸಿ, ಕೂರಿಸಿ ಮಾತನಾಡಿಸುತ್ತಾರೆ. ಆದರೆ ದೂರುದಾರನನ್ನು ನಿಲ್ಲಿಸಿ ಮಾತನಾಡಿಸುತ್ತಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಎಂದರೆ ಭಾರಿ ಗೌರವ. ಭಾನುಪ್ರಕಾಶ್ ಅವರು ಇಂಚಾರ್ಜ್ ಎಂದು ಗೊತ್ತಿರಲಿಲ್ಲ. ಆರೋಪಿ ಬಿಜೆಪಿ ಪಕ್ಷಕ್ಕೆ ಸೇರಿದವನಾದರೆ ಟೀ ತರಿಸಿ ಕೂರಿಸಿ ಮಾತನಾಡಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಿ ಮಾಡಿಸಲು ಮುಂದಾಗುತ್ತಾರೆ
ಬಿಜೆಪಿಯವರು ತಪ್ಪು ಮಾಡಿದಲ್ಲೆಲ್ಲ ಪೊಲೀಸರು ರಾಜಿ ಮಾಡಿಸುತ್ತಿದ್ದಾರೆ. ಕಾಂಗ್ರೆಸ್’ನವರು ತಪ್ಪು ಮಾಡಿದರೆ ಕೂಡಲೆ ಪ್ರಕರಣ ದಾಖಲು ಮಾಡಿ, ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ. ಕಲ್ಲು ಕಂಬಗಳನ್ನು ಕದ್ದುಕೊಂಡು ಹೋಗಿರುವ ಕುರಿತು ದೂರು ಕೊಟ್ಟರೆ ಪ್ರಕರಣ ದಾಖಲು ಮಾಡಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೂ ತಿಳಿಸಲಾಗಿದೆ ಎಂದರು.
ಪೊಲೀಸ್ ಠಾಣೆಯಿಂದ ಕರೆ ಮಾಡಿ, ರಾಜಿ ಮಾಡಿಕೊಳ್ಳುವಂತೆ ದೂರುದಾರರಿಗೆ ತಿಳಿಸುತ್ತಿದ್ದಾರೆ. ಘಟನೆ ಖಂಡಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಎಚ್ಚರಿಸಿದರು.
Politics News
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






