ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | Wild Animal | 10 ಏಪ್ರಿಲ್ 2022
ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ ಸಾಕು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಮಾಲೀಕನನ್ನು ಕಾಪಾಡಿವೆ.
ಸೊರಬ ತಾಲೂಕು ಆನವಟ್ಟಿ ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ಘಟನೆ ನಡೆದಿದೆ. ಬಂಗಾರಪ್ಪ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ.
ಬಂಗಾರಪ್ಪ ಅವರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ ಬಂಗಾರಪ್ಪ ಅವರ ಕೈ, ಕಾಲುಗಳಿಗೆ ಗಂಭೀರ ಗಾಯವಾಗಿದೆ. ಇನ್ನು, ಬಂಗಾರಪ್ಪ ಅವರ ಮೇಲೆ ದಾಳಿ ನಡೆಸಿದ ಚಿರತೆ ಮೇಲೆ ಸಾಕು ನಾಯಿಗಳು ದಾಳಿ ನಡೆಸಿವೆ.
ಬಂಗಾರಪ್ಪ ಅವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಮೇಲೆ ಸಾಕು ನಾಯಿಗಳು ದಾಳಿ ನಡೆಸಿದವು. ಚಿರತೆಯನ್ನು ಓಡಿಸಿ ಬಂಗಾರಪ್ಪ ಅವರ ಪ್ರಾಣ ರಕ್ಷಣೆ ಮಾಡಿದವು. ಬಂಗಾರಪ್ಪ ಅವರನ್ನು ಶಿಕಾರಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
wild animal
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





