SHIVAMOGGA LIVE NEWS | Gambling| 12 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಾಡಿನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮೂವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಶ್ರೀಧರ್ (27), ಸುರೇಶ್ (26), ಬಸವರಾಜ (31) ಬಂಧಿತರು. ಗಾಜನೂರಿನ ಕಾಡಿನಲ್ಲಿ ಇವರು ಜೂಜಾಟ ಆಡುತ್ತಿದ್ದರು.
ಜೂಜಾಟದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಪೊಲೀಸರನ್ನು ಕಂಡ ಕೂಡಲೆ ಜೂಜಾಟ ಆಡುತ್ತಿದ್ದವರು ಪರಾರಿಯಾಗಿದ್ದಾರೆ.
ಬೆನ್ನೆಟ್ಟಿದ ಪೊಲೀಸರು ಶ್ರೀಧರ್, ಸುರೇಶ್, ಬಸವರಾಜ ಎಂಬುವವರನ್ನು ಬಂಧಿಸಿದ್ದಾರೆ. ಪ್ರಸನ್ನ, ಶಿವಕುಮಾರ್, ಸಂದೀಪ ಎಂಬುವವರು ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ | ನಡುರಸ್ತೆಯಲ್ಲಿ ಸಾಲದ ಹಣಕ್ಕಾಗಿ ಕಿತ್ತಾಟ, ಒಬ್ಬನಿಗೆ ಚಾಕು ಇರಿತ
Gambling
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






