ಶಿವಮೊಗ್ಗದಲ್ಲಿ ಪಂಜು ಹಿಡಿದು ಸಚಿವರ ಕಚೇರಿಗೆ ಮುತ್ತಿಗೆ ಯತ್ನ

SHIVAMOGGA LIVE NEWS | PROTEST | 12 ಏಪ್ರಿಲ್ 2022

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ NSUI ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.

ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಪಂಜಿನ ಮೆರವಣಿಗೆ ಆರಂಭಿಸಿದ NSUI ಕಾರ್ಯಕರ್ತರು ಸಚಿವ ಈಶ್ವರಪ್ಪ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಸಚಿವರ ಕಚೇರಿಗೆ ಮುತ್ತಿಗೆ ಯತ್ನ

ನೆಹರೂ ರಸ್ತೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಚೇರಿ ಇದೆ. ಈ ಕಚೇರಿಗೆ NSUI ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು NSUI ಕಾರ್ಯಕರ್ತರನ್ನು ತಡೆದರು. ಕೆಲವು ಕಾರ್ಯಕರ್ತರು ಗೇಟು ಹಾರಿ ಕಚೇರಿ ಕಾಂಪೌಂಡ್ ಒಳ ನುಗ್ಗಲು ಯತ್ನಿಸಿದರು.

Kalleshwara-Enterprises.webp

ಘೋಷಣೆ, ರಾಜೀನಾಮೆ ಆಗ್ರಹ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮತ್ತು ಶೇ.40ರಷ್ಟು ಕಮಿಷನ್ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು NSUI ಕಾರ್ಯಕರ್ತರು ಆಗ್ರಹಿಸಿದರು. ಆತ್ಮಹತ್ಯೆಗೆ ನೇರ ಕಾರಣವಾಗಿರುವ ಹಿನ್ನೆಲೆ ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

NSUI ಪ್ರಮುಖರಾದ ಚೇತನ್ ಗೌಡ, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, NSUI ಜಿಲ್ಲಾಧ್ಯಕ್ಷ ವಿಜಯ್, ವಿಧಾನ ಪರಿಷತ್ ಮಾಜಿ ಸದದ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಕಾರ್ಪೊರೇಟರ್’ಗಳಾದ ರಮೇಶ್ ಹೆಗ್ಡೆ, ಪ್ರಮುಖರಾದ ಎನ್.ರಮೇಶ್, ಪಲ್ಲವಿ ಸೇರಿ ಹಲವರು ಈ ಸಂದರ್ಭ ಇದ್ದರು.

Shimoga nanjappa hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment