SHIVAMOGGA LIVE NEWS | CRIME | 15 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ ಸಂಬಂಧ ಯುವಕನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ.
13 ಮಂದಿ ವಿರುದ್ಧ ಕೇಸ್
ರಾಖಿ ಎಂಬಾತನ ವಿಚಾರಣೆ ವೇಳೆ ಮುಸ್ಲಿಂ ಯುವಕನ ಹತ್ಯೆಗೆ ಸಂಚು ಕುರಿತು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ರಾಖಿ ಸೇರಿದಂತೆ ಶಿವಮೊಗ್ಗದ 13 ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಖಿ ಸಿಕ್ಕಿಬಿದ್ದಿದ್ದು ಹೇಗೆ?
ಫೆ.21ರಂದು ಬೆಳಗ್ಗೆ 11.30ಕ್ಕೆ ಸೀಗೆಹಟ್ಟಿಯಲ್ಲಿ ಪತ್ರಕರ್ತ ಮೊಹಮದ್ ರಫಿ ಅವರ ಮೇಲೆ ಗುಂಪು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ರಾಖಿ ಎಂಬಾತನ ವಿಚಾರಣೆ ನಡೆಸಲಾಗುತ್ತಿತ್ತು. ಆಗ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿರುವುದಾಗಿ ಹೇಳಿಕೆ ನೀಡಿದ್ದಾನೆ ಎಂದು ಎಫ್ಐಆರ್ ದಾಖಲು ಮಾಡಲಾಗಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (CRIME)
ಇದನ್ನೂ ಓದಿ | ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಸಂತೋಷ್ ಪಾಟೀಲ್’ಗೆ ಶ್ರದ್ಧಾಂಜಲಿ ಫ್ಲೆಕ್ಸ್ ಪ್ರತ್ಯಕ್ಷ, ಎಷ್ಟು ಕಡೆ ಫ್ಲೆಕ್ಸ್ ಹಾಕಲಾಗಿದೆ?
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






