ಸಂತೋಷ್ ಆತ್ಮಹತ್ಯೆ, ವೀರಶೈವ ಸಮಾಜದಿಂದ ಪ್ರಮುಖ ಸಭೆ, ಏನೆಲ್ಲ ನಿರ್ಣಯವಾಯ್ತು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | VEERASHAIVA LINGAYATH | 16 ಏಪ್ರಿಲ್ 2022

ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಶಿವಮೊಗ್ಗದ ವೀರಶೈವ ಲಿಂಗಾಯತ ಸಮಾಜ ನಿರ್ಧಾರಿಸಿದೆ. ನೊಂದ ಜೀವಕ್ಕೆ ಪಶ್ಚಾತ್ತಾಪ ನಿಧಿ ಸಂಗ್ರಹಿಸಲು ಯೋಜಿಸಲಾಗಿದೆ.

ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ನಿರ್ಧಾರ ಪ್ರಕಟಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ಹಿಂದೂ ಸಮಾಜ ನೆರವು ನೀಡಿದಂತೆ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ನೆರವಾಗಲು ತೀರ್ಮಾನ ಕೈಗೊಳ್ಳಲಾಗಿದೆ.

ನಿಧಿ ಸಂಗ್ರಹ ಹೇಗೆ?

ಸಂತೋಷ್ ಪಾಟೀಲ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ನಿಧಿ ಸಂಗ್ರಹ ಮಾಡಲು ತೀರ್ಮಾನಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದವರು ನೆರವು ನೀಡಬಹುದು. ಸಾರ್ವಜನಿಕರಿಂದಲೂ ಹಣ ಸಂಗ್ರಹ ಮಾಡಬಹುದಾಗಿದೆ. ಇದಕ್ಕಾಗಿ ಹುಂಡಿಗಳನ್ನು ಸಿದ್ಧಪಡಿಸಲು ಯೋಜಿಸಲಾಗಿದೆ.

ಪಶ್ಚತ್ತಾಪ ನಿಧಿ ಅಂತಾ ಹೆಸರಿಟ್ಟಿದ್ದೇಕೆ?

ಅಭಿಯಾನಕ್ಕೆ ಸೂಕ್ತ ಹೆಸರು ಸೂಚಿಸುವ ಸಂದರ್ಭ ಸಾಗರ ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು, ಪಶ್ಚಾತ್ತಾಪ ನಿಧಿ ಎಂದು ಹೆಸರು ಸೂಚಿಸಿದರು. ಸಂತೋಷ್ ಅವರ ಸಾವಿಗೆ ಕಾರಣರಾದ ನಾಯಕರನ್ನು ಆಯ್ಕೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡೆಬೇಕಿದೆ. ಅದಕ್ಕಾಗಿ ನಾವು ಪಶ್ಚಾತ್ತಾಪ ನಿಧಿ ಸಂಗ್ರಹಿಸಿ ಕೊಡಬೇಕಾಗಿದೆ ಎಂದರು. ಸಭೆಯಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿತು. ಕೊನೆಗೆ ‘ನೊಂದ ಜೀವಕ್ಕೆ ಪಶ್ಚತ್ತಾಪ ನಿಧಿ’ ಎಂದು ಘೋಷಣೆ ಮಾಡಲಾಯಿತು.

2.50 ಲಕ್ಷ ರೂ. ವಾಗ್ದಾನ

ಸಂತೋಷ್ ಪಾಟೀಲ್ ಕುಟುಂಬಕ್ಕೆ ನೆರವಾಗಲು ಈಗಾಗಲೆ ಹಲವರು ಮುಂದಾಗಿದ್ದಾರೆ. ಆದರೆ ಸ್ಪಷ್ಟ ರೂಪುರೇಷೆ ಇರಲಿಲ್ಲ. ಈಗ ವೀರಶೈವ ಲಿಂಗಾಯತ ಸಮಾಜ ವೇದಿಕೆ ಸಿದ್ಧಪಡಿಸಿದೆ. ಸಭೆಯಲ್ಲೆ 2.50 ಲಕ್ಷ ರೂ. ಆರ್ಥಿಕ ನೆರವು ಘೋಷಣೆಯಾಯಿತು.

ನಿಧಿ ಸಂಗ್ರಹಕ್ಕೆ ಗಡುವು

ಇನ್ನು, ನೊಂದ ಜೀವಕ್ಕೆ ಪಶ್ಚತ್ತಾಪ ನಿಧಿ ಸಂಗ್ರಹಕ್ಕೆ ಗಡುವು ನಿಗದಿ ಮಾಡಲಾಗಿದೆ. ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸಂಗ್ರಹವಾದ ಹಣವನ್ನು ಏಪ್ರಿಲ್ 23ರಂದು ಕುಟುಂಬಕ್ಕೆ ಹಸ್ತಾಂತರ ಮಾಡಲು ನಿರ್ಧರಿಸಲಾಗಿದೆ. ಬೆಳಗಾವಿಗೆ ತೆರಳಿ ಸಂತೋಷ್ ಪಾಟೀಲ್ ಅವರ ಪತ್ನಿಗೆ ಹಣವನ್ನು ನೀಡಲಾಗುತ್ತದೆ.

ರಾಜ್ಯದಲ್ಲೆ ಮೊದಲು ಈ ಪ್ರಯತ್ನ

ಸಂತೋಷ್ ಪಾಟೀಲ್ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಕಾರ್ಯ ರಾಜ್ಯದಲ್ಲೇ ಮೊದಲ ಪ್ರಯತ್ನ. ಶಿವಮೊಗ್ಗದಿಂದ ಪ್ರಾರಂಭ ಮಾಡಿದರೆ ಉಳಿದೆಡೆಯಲ್ಲೂ ನಿಧಿ ಸಂಗ್ರಹಕ್ಕೆ ಪ್ರೇರಣೆ ಸಿಕ್ಕಂತಾಗಲಿದೆ ಎಂದು ಸಮಾಜದ ಮುಖಂಡರ ಯೋಚನೆ.

ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಪಿ.ದಿನೇಶ್, ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್, ಪ್ರಮುಖರಾದ ಮಹೇಶ್ವರಪ್ಪ, ಬಿ.ಕೆ.ಮೋಹನ್, ಪ್ರಕಾಶ್, ಶಿವಕುಮಾರ್, ವಿಜಯಲಕ್ಷ್ಮಿ ಸಿ.ಪಾಟೀಲ್, ಎನ್.ಎಸ್.ಕುಮಾರ್, ಟಿ.ಎಂ.ಕುಮಾರ್, ಚನ್ನೇಶ್, ಪ್ರಕಾಶ್, ಪಿ.ವೀರಮ್ಮ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

santosh patil meeting

BK Mohan in veerashaiva meeting

Shimoga Nanjappa Hospital

Santosh meeting in Shimoga

Shimoga Nanjappa Hospital

Santosh meeting in Shimoga

santosh meeting in Shimoga

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

VEERASHAIVA LINGAYATH

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment