ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 19 ಏಪ್ರಿಲ್ 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿವಮೊಗ್ಗ ಪ್ರವಾಸದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರ ಚಲನವಲನ ಗಮನಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಬೆಳಗ್ಗೆಯಿಂದ ಮುಖಂಡರ ಮನೆಗಳ ಮುಂದೆ ಪೊಲೀಸರು ಠಿಕಾಣಿ ಹೂಡಿದ್ದಾರೆ.
ಯುವ ಕಾಂಗ್ರೆಸ್, NSUI ಸೇರಿದಂತೆ ಯುವ ಮುಖಂಡರಿಗೆ ಇವತ್ತು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಗೆಲ್ಲಾ ಮುಖಂಡರುಗಳ ಮನೆ ಮುಂದೆ ಹಾಜರಾದ ಪೊಲೀಸರು, ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ನೀವು ಇಂದು ಮನೆಯಲ್ಲೇ ಇರಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮ ಮುಗಿಯುವವರೆಗೂ ಮನೆಯಿಂದ ಹೊರಬರುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ ಎಂದು ಮುಖಂಡರು ಆರೋಪಿಸಿದರು. ಪೊಲೀಸರು ಮುಖಂಡರ ಮನೆ ಮುಂದೆ ಕುರ್ಚಿ ಹಾಕಿಸಿಕೊಂಡು ಬಾಗಿಲು ಕಾಯುತ್ತಿದ್ದ ದೃಶ್ಯವು ಕಂಡುಬಂದವು.
ವಿಡಿಯೋ ಬಿಡುಗಡೆ
ಯುವ ಮುಖಂಡರ ಮನೆಗಳ ಮುಂದೆ ಪೊಲೀಸರನ್ನು ನಿಯೋಜನೆ ಮಾಡಿರುವ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್ ಅವರ ಮನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಅವರ ಚಲನವಲನದ ಕುರಿತು ನಿಗಾ ವಹಿಸಲಾಗಿತ್ತು. ಇದರ ವಿಡಿಯೋವನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದಾರೆ.
ನಿಗಾ ವಹಿಸಲು ಕಾರಣವೇನು?
ಗುತ್ತಿಗೆದಾರ ಸಂತೋಷ್ ಪಾಟೀಲ್ ಅತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರಮುಖ ಆರೋಪಿಯಾಗಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿದ್ದರು. ಕಳೆದ ವಾರ ಈ ಘಟನೆಯಿಂದಾಗಿ ಬಿಜೆಪಿ ಕಚೇರಿ ಮುಂಭಾಗ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈಗ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಪಟ್ಟು ಹಿಡಿದಿದ್ದಾರೆ. ರಾಜ್ಯಾದ್ಯಂತ ಸಚಿವರು, ಸಂಸದರಿಗೆ ಕಪ್ಪು ಬಾವುಟ ಪ್ರದರ್ಶನ, ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನಗಳು ನಡೆದಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಯುವ ಕಾಂಗ್ರೆಸ್ ಅಥವಾ NSUI ಮುಖಂಡರು ಮುಖ್ಯಮಂತ್ರಿ ಅವರ ಕಾರಿಗೆ ಮುತ್ತಿಗೆ ಹಾಕುವ ಸಂಭವದ ಹಿನ್ನೆಲೆ ಅವರ ಚಲನವಲನದ ಮೇಲೆ ನಿಗಾ ವಹಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















