SHIVAMOGGA LIVE NEWS | SHIMOGA RAIN | 25 ಏಪ್ರಿಲ್ 2022
ಮಳೆ, ಗಾಳಿ, ಸಿಡಿಲಿಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾವು, ನೋವು ಸಂಭವಿಸಿದೆ. ಆಸ್ತಿಪಾಸ್ತಿಗೆ ಹಾನಿಯು ಉಂಟಾಗಿದೆ. ಒಂದೆಡೆ ಸಿಡಿಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಮತ್ತೊಂದೆಡೆ ಹಸುಗಳು ಕೊನೆಯುಸಿರೆಳೆದಿವೆ.
ಎಲ್ಲೆಲ್ಲಿ? ಏನೇನಾಗಿದೆ?
ಸಿಡಿಲು ಬಿಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಸೊರಬ ತಾಲೂಕು ಇಂಡುವಳ್ಳಿ ಗ್ರಾಮದಲ್ಲಿ ಸಂಜೆ ಘಟನೆ ಸಂಭವಿಸಿದೆ. ಗ್ರಾಮದ ನಾಗರಾಜ (23) ಮೃತ ದುರ್ದೈವಿ. ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತವಾಗಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿ ಸಿಡಿಲಿಗೆ ಎರಡು ಹಸುಗಳು ಸಾವಿನ್ನಪ್ಪಿವೆ. ಚಂದ್ರಶೇಖರ್ ಎಂಬವವರಿಗೆ ಸೇರಿದ ದನಗಳು ಮನೆ ಬಳಿ ಮರದ ಕಳೆಗೆ ನಿಂತಿದ್ದಾಗ ಸಿಡಿಲು ಬಡಿದಿದೆ. ಎರಡು ದನಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ, ನಿರ್ಮಾಣ ಹಂತದ ಶೆಡ್ ಕುಸಿತ
RAIN