SHIVAMOGGA LIVE NEWS | SHIMOGA JOBS | 26 ಏಪ್ರಿಲ್ 2022
ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮುಂಗಾರು ಪ್ರಾರಂಭವಾಗಿ, ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿದೆ. ಹಾಗಾಗಿ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವುದೆ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತುಂಗಾ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು. ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತುಂಗಾ ಮೇಲ್ದಂಡೆ ಯೋಜನೆಯ ನೀರಾರವಿ ನಿಗಮ ನಿಯಮಿತಿಯ ಕಾರ್ಯಪಾಲಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ, ನಿರ್ಮಾಣ ಹಂತದ ಶೆಡ್ ಕುಸಿತ