SHIVAMOGGA LIVE NEWS | SHIMOGA PRAYER | 26 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರವೀಂದ್ರನಗರ ಶ್ರೀ ಗಣಪತಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಏ.30ರಂದು ಬೆಳಗ್ಗೆ 11 ಗಂಟೆಯಿಂದ ಶ್ರೀ ರುದ್ರಹೋಮ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಅ.ಪ.ರಾಮಭಟ್ಟ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ.ಪ.ರಾಮಭಟ್ಟ ಅವರು, ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಹೋಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಲೋಕಕಲ್ಯಾಣಾರ್ಥವಾಗಿ ಶತಕೋಟಿ ಓಂ ನಮಃ ಶಿವಾಯ ಜಪ ಯಜ್ಞ ನಡೆಯುತ್ತಿದೆ. ಇದರ ಅಂಗವಾಗಿ ರುದ್ರಹೋಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹರಿಹರಪುರ ಶ್ರೀ ಕ್ಷೇತ್ರದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಏ.30ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋ ಪೂಜೆ, ಹೋಮ ಮುಂತಾದ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. 11 ಗಂಟೆಗೆ ಶ್ರೀ ರುದ್ರಹೋಮ, ಮಹಾಪೂರ್ಣಾಹುತಿ ನಡೆಯಲಿದೆ. 11.30ಕ್ಕೆ ಕಾರ್ಕಳದ ವಾಗ್ಮಿ ಆದರ್ಶ ಗೋಕಲೆ ಯವರಿಂದ ಧಾರ್ಮಿಕ ಉಪನ್ಯಾಸವಿರುತ್ತದೆ ಎಂದರು.
ಭಜನಾ ಪರಿಷತ್ನ ಉಪಾಧ್ಯಕ್ಷ ಎನ್.ಶ್ರೀಧರ್, ಭಜನಾ ಪರಿಷತ್ನ ಕಾರ್ಯದರ್ಶಿ ಶಬರೀಶ್ ಕಣ್ಣನ್, ದೇವಸ್ಥಾನ ಸಮಿತಿಯ ಮುಖ್ಯಸ್ಥ ಉಮಾಪತಿ, ಸತೀಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಇದನ್ನೂ ಓದಿ – ಗಾಜನೂರು ಡ್ಯಾಂ ಭರ್ತಿ, ಯಾವುದೆ ಕ್ಷಣದಲ್ಲಿ ನೀರು ಹೊರಬಿಡುವ ಎಚ್ಚರಿಕೆ

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






