SHIVAMOGGA LIVE NEWS | SHIMOGA CRIME| 27 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಹೊನ್ನಾಳಿ ಸೇತುವೆ ಮೇಲೆ ಯುವಕನೊಬ್ಬನ ಕತ್ತು ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಲಾಗಿದೆ.
ರಾಗಿಗುಡ್ಡ ನಿವಾಸಿ ಪವನ್ (20) ಎಂಬಾತನ ಮೇಲೆ ಹಲ್ಲೆಮಾಡಿ, ಕತ್ತು ಹಿಸುಕಿ ಕೊಲೆಗೆ ಯತ್ನಿಸಲಾಗಿದೆ. ಹೋಂಡಾ ಆಕ್ಟೀವಾ ಬೈಕಿನಲ್ಲಿ ಬಂದ ಮೂವರು ಕೃತ್ಯ ಎಸಗಿದ್ದಾರೆ. ಆದರೆ ಘಟನೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ.
ಏನಿದು ಪ್ರಕರಣ?
‘ಸಿಟಿ ಕ್ಲಬ್’ನಲ್ಲಿ ಕೆಲಸ ಮುಗಿಸಿ ಪವನ್ ರಾತ್ರಿ ನಡೆದುಕೊಂಡು ಹೊನ್ನಾಳಿ ಸೇತುವೆ ಮೂಲಕ ಮನೆಗೆ ತೆರಳುತ್ತಿದ್ದಾಗ ಹೋಂಡಾ ಆಕ್ಟೀವಾದಲ್ಲಿ ಬಂದ ಮೂವರು ಅಡ್ಡಗಟ್ಟಿದ್ದಾರೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ನಡುರಾತ್ರಿ ಹೊನ್ನಾಳಿ ಸೇತುವೆ ಮೇಲೆ ಪವನ್’ನನ್ನು ಅಡ್ಡಗಟ್ಟಿದ ಮೂವರು ‘ಕಹಾ ಜಾ ರಹ ಹೈ’ ಎಂದು ಪ್ರಶ್ನಿಸಿದ್ದಾರೆ. ಮೂವರ ಪೈಕಿ ಒಬ್ಬಾತ ಇವತ್ತು ನಿನ್ನನ್ನು ಬಿಡುವುದಿಲ್ಲ ಎಂದು ಬೈಕಿನಿಂದ ಕೆಳಗಿಳಿದವನೆ ಮೂಗಿಗೆ ಪಂಚ್ ಕೊಟ್ಟಿದ್ದಾನೆ. ರಕ್ತ ಸುರಿಯುತ್ತಿದ್ದಂತೆ ಕತ್ತು ಹಿಸುಕಿ ಪವನ್ ಹತ್ಯೆ ಮಾಡಲು ಯತ್ನಿಸಿದ್ದಾರೆ.
ಪವನ್ ಜೋರಾಗಿ ಕೂಗಿಕೊಂಡಿದ್ದರಿಂದ ಸಮೀಪದಲ್ಲಿ ಹೋಗುತ್ತಿದ್ದ ಬೈಕ್ ಸವಾರರು ಬಂದು ಜಗಳ ಬಿಡಿಸಿದ್ದಾರೆ. ಗಾಯಗೊಂಡಿದ್ದ ಪವನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ದುಷ್ಕರ್ಮಿಗಳು 20 ರಿಂದ 30 ವರ್ಷ ವಯಸ್ಸಿನವರು ಎಂದು ದೂರಿನಲ್ಲಿ ತಿಳಿಸಲಾಗಿದೆ. ‘ಆರೋಪಿಗಳ ಪತ್ತೆಗೆ ಕೋಟೆ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಟಯರ್ ಸ್ಪೋಟ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






