ಶಿವಮೊಗ್ಗದಲ್ಲಿ ಭಯದ ವಾತಾವರಣ ಸೃಷ್ಟಿ, ಕಠಿಣ ಕ್ರಮಕ್ಕೆ ಎಸ್.ಪಿಗೆ ದೂರು

SHIVAMOGGA LIVE NEWS | HINDU| 28 ಏಪ್ರಿಲ್ 2022

ಕಳೆದ ಮೂರು ತಿಂಗಳಿಂದ ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಗರ ಘಟಕ ಆಗ್ರಹಿಸಿದೆ.

ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಗೆ ಬಿಜೆಪಿ ನಗರ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಏನಿದೆ?

ಪ್ರಶಾಂತವಾಗಿದ್ದ ಶಿವಮೊಗ್ಗ ನಗರದಲ್ಲಿ ಕಳೆದ 3 ತಿಂಗಳಿಂದ ಅಶಾಂತಿ ಸೃಷ್ಟಿಸಲಾಗುತ್ತಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳ ಮೇಲೆ ನಿರಂತರ ಹಲ್ಲೆ ನಡೆಸಲಾಗುತ್ತಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

Kalleshwara-Enterprises.webp

ಹಿಜಾಬ್ ವಿವಾದದ ನಂತರ ಶಿವಮೊಗ್ಗ ನಗರದಲ್ಲಿ ಹಲ್ಲೆ ನಡೆಸಲಾಗುತ್ತಿದೆ. ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ರಾಹುಲ್ ಮತ್ತು ಸಚಿನ್ ಮೇಲೆ ಹಲ್ಲೆಯಾಯಿತು. ನಂತರ ಹರ್ಷ ಕೊಲೆ, ಅನುಪಿನಕಟ್ಟೆಯಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ ಹಲ್ಲೆ, ಟಿಪ್ಪುನಗರದ ಮಂಜುನಾಥ ಬಡಾವಣೆ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ, ಗೋಪಾಲಗೌಡ ಬಡಾವಣೆ ಡೈರಿಯ ನಾಗರಾಜ್ ಮೇಲೆ ಹಲ್ಲೆ, ಅಶೋಕನಗರದಲ್ಲಿ ನೀರಾವರಿ ಇಲಾಖೆಯ ಸಂತೋಷ್, ಬಜರಂಗದಳ ಕಾರ್ಯಕರ್ತ ಭರತ್’ಗೆ ಕೊಲೆ ಬೆದರಿಕೆ, ಎಂಕೆಕೆ ರಸ್ತೆಯಲ್ಲಿ ಅಕ್ಷಯ್ ಜೋಯ್ಸ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ವರದಿಯಾಗಿವೆ.

ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ – ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

Shimoga Nanjappa Hospital

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment