SHIVAMOGGA LIVE NEWS | SHIMOGA | 29 ಏಪ್ರಿಲ್ 2022
ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ಕ್ಷೇತ್ರವನ್ನು ಸಹ ಗೆಲ್ಲಲಿದ್ದೇವೆ. ಅದಕ್ಕಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರವನ್ನು ಈ ಭಾರಿ ಗೆಲ್ಲುತ್ತೇವೆ. ಅದಕ್ಕಾಗಿ ವಿಶೇಷ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.
ರಾಜ್ಯ ಪ್ರವಾಸ ಪ್ರಾರಂಭವಾಗುತ್ತಿದೆ
ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ಪ್ರವಾಸ ಪ್ರಾರಂಭವಾಗುತ್ತಿದೆ. ವಾರಕ್ಕೊಂದು ಜಿಲ್ಲೆಗೆ ಹೋಗುತ್ತೇವೆ. ಪಕ್ಷದ ಸ್ಥಿತಿಗತಿ ತಿಳಿದುಕೊಂಡು, ಸಂಘಟನೆ ಬಲಪಡಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಪ್ರತಿ ಕುಟುಂಬಕ್ಕೆ ಒಂದಿಲ್ಲೊಂದು ಸೌಲಭ್ಯ ಒದಗಿಸಿದೆ. ಅದರ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.
ಸಂಪುಟ ವಿಸ್ತರಣೆ ಚರ್ಚೆ
ಇನ್ನು, ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 2ರಂದು ಅಮಿತ್ ಷಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆ ಸಂದರ್ಭ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.
ವಿಮಾನ ನಿಲ್ದಾಣದ ಹೆಸರು
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಸೂಕ್ತವಲ್ಲ. ಸ್ವಾತಂತ್ರ್ಯ ಹೋರಾಟಗಾರರು, ಪ್ರಮುಖರ ಹೆಸರು ಇಡುವುದು ಒಳ್ಳೆಯದು ಎಂದು ಯಡಿಯೂರಪ್ಪ ಅವರು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರು ಇಡುವಂತೆ ಒತ್ತಾಯವಿದೆ? ಇಲ್ಲಿದೆ ಲಿಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200