ಉಂಬೈಬೈಲ್-ಲಿಂಗಾಪುರದಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುವಾಗ ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಶಿಕಾರಿಪುರದ ಹುಚ್ಚರಾಯಪ್ಪ ಗಾಯಾಳು, ಫೆ.3ರಂದು ಶಿರಾಳಕೊಪ್ಪದ ಎಲೆಕ್ಟ್ರಿಕಲ್ ಗುತ್ತಿಗೆದಾರ ಸಚಿನ್ ಉಂಬೈಬೈಲ್-ಲಿಂಗಾಪುರ ಗ್ರಾಮಕ್ಕೆ ವಿದ್ಯುತ್ ಕಾಮಗಾರಿಗೆ ಹುಚ್ಚರಾಯಪ್ಪನನ್ನು ಕರೆದೊಯ್ದಿದ್ದ ಎಂದು ಆರೋಪಿಸಲಾಗಿದೆ.
ಸುರಕ್ಷಿತ ಕ್ರಮವಿಲ್ಲ
ಯಾವುದೇ ಸುರಕ್ಷಿತಾ ಕ್ರಮ ಅನುಸರಿಸದೆ ಹುಚ್ಚರಾಯಪ್ಪನನ್ನು ವಿದ್ಯುತ್ ಕಂಬ ಹತ್ತಿಸಲಾಗಿತ್ತು. ಈ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಹುಚ್ಚರಾಯಪ್ಪ ಸೊಂಟ ಮುರಿದುಕೊಂಡಿದ್ದ. ತಕ್ಷಣವೇ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಗುತ್ತಿಗೆದಾರ ಸಚಿನ್ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದ.
ಇದುವರೆಗೆ ಗುತ್ತಿಗೆದಾರ ಚಿಕಿತ್ಸಾ ವೆಚ್ಚ ಭರಿಸುವಲ್ಲಿ ವಿಫಲನಾಗಿದ್ದಾನೆ. ಹಾಗಾಗಿ ಹುಚ್ಚರಾಯಪ್ಪನ ತಂದೆ ವಿಜಯಕುಮಾರ್ ಅವರು ತುಂಗಾನಗರ ಠಾಣೆಯಲ್ಲಿ ಸಚಿನ್ ವಿರುದ್ಧ ದೂರು ನೀಡಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ