ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | STONE PELTING | 07 ಮೇ 2022
ಶಿವಮೊಗ್ಗದ ಸೂಳೆಬೈಲಿನಲ್ಲಿ ಕಳೆದ ರಾತ್ರಿ ಕಾರಿನ ಮೇಲೆ ಕಲ್ಲು ತೂರಿದ ಘಟನೆ ಸಂಬಂಧ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹರಿಕೃಷ್ಣ ಅವರು ತೆರಳುತ್ತಿದ್ದ ಕಾರಿನ ಮೇಲೆ ದಾಳಿಯಾಗಿದೆ ಎಂದು ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇವತ್ತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಹರಿಕೃಷ್ಣ ಹೇಳಿದ್ದೇನು?
ಪಾಯಿಂಟ್ 1 – ನನ್ನ ಗೆಳೆಯರ ಕಾರಿನ ಮೇಲೆ ದಾಳಿಯಾಗಿದೆ. ಆ ಕಾರಿನಲ್ಲಿ ನಾನು ಇರಲ್ಲಿಲ್ಲ. ಅದು ನನ್ನ ಕಾರು ಕೂಡ ಅಲ್ಲ. ಕೆಲವು ಪತ್ರಿಕೆ, ಮಾಧ್ಯಮಗಳಲ್ಲಿ ತಾವು ಇದ್ದ ಕಾರಿನ ಮೇಲೆ ದಾಳಿಯಾಗಿದೆ ಎಂದು ವರದಿಯಾಗಿದೆ. ಆದರೆ ತಾನು ಕಾರಿನಲ್ಲಿ ಇರಲಿಲ್ಲ.
ಪಾಯಿಂಟ್ 2 – ಸೂಳೆಬೈಲು ಭಾಗದಲ್ಲಿ ಮುಸ್ಲಿಂ ಬಾಹುಳ್ಯ ಹಚ್ಚಿದೆ. ಈ ಭಾಗದಲ್ಲಿ ಮುಸ್ಲಿಮರು ಅಲ್ಲಲ್ಲಿ ಗುಂಪುಗೂಡಿ ನಿಲ್ಲುತ್ತಾರೆ. ಕಳೆದೊಂದು ವಾರದಿಂದ ಸಣ್ಣ ಪ್ರಮಾಣ ಹಿಂಸೆ ಆರಂಭಿಸಿದ್ದಾರೆ. ಹಿಂದೂಗಳನ್ನು ಪ್ರಚೋದಿಸುತ್ತಿದ್ದಾರೆ. ಜಗಳಕ್ಕೆ ಕರೆಯುವಂತೆ ಮಾಡುತ್ತಿದ್ದಾರೆ.
ಪಾಯಿಂಟ್ 3 – ಅನೇಕ ಹಿಂದೂಗಳು ಈ ಹಿಂಸೆ ಅನುಭವಿಸಿದ್ದಾರೆ. ಹಾಗಾಗಿಯೆ ರಾತ್ರಿ ವಿಚಾರ ತಿಳಿಯುತ್ತಿದ್ದಂತೆ ಎಲ್ಲರೂ ಒಗ್ಗೂಡಿ ಪ್ರತಿಭಟನೆ ನಡೆಸಿದರು.
ಪಾಯಿಂಟ್ 4 – ಹರ್ಷ ಹತ್ಯೆ ಬಳಿಕ ಈ ರೀತಿಯ ಘಟನೆಗಳು ಇನ್ನೊಂದೆರಡು ಕಡೆ ನಡೆದಿದೆ. ಪೊಲೀಸ್ ಇಲಾಖೆ ಇದನ್ನು ಬೇರೆ ಬೇರೆ ಘಟನೆಯಾಗಿ ಪರಿಗಣಿಸಬಾರದು. ಇದು ಕೋಮು ಗಲಭೆಯಲ್ಲ. ಹಿಂದೂ ಸಮಾಜವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿ.
ಪಾಯಿಂಟ್ 5 – ಕಳೆದ ರಾತ್ರಿಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕರೆ ಮಾಡಿದ್ದರು. ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪೊಲೀಸರಿಗು ಕೂಡ ಕಾನೂನು ಕ್ರಮ ಕೈಗೊಳ್ಳುವ ಕುರಿತು ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಮೇಲೆ ಕಲ್ಲು ತೂರಾಟ, ಗ್ಲಾಸ್ ಪೀಸ್, ಪೀಸ್, ಬಿಗುವಿನ ವಾತಾವರಣ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





