ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | TRUCK| 08 ಮೇ 2022
ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಕೆರೆಗೆ ಇಳಿದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.
ಆನಂದಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಹೊಂದಿಕೊಂಡಿರುವ ಗಾಣಿಗನ ಕೆರೆಗೆ ಶನಿವಾರ ಟಿಪ್ಪರ್ ಕೆರೆಗೆ ಇಳಿದಿದೆ. ಟಿಪ್ಪರ್ ಕೆರೆಯ ಕಡೆಗೆ ವಾಲುತ್ತಿದ್ದಂತೆ ಚಾಲಕ ಇರುವಕ್ಕಿ ಗ್ರಾಮದ ಮಣಿಕಂಠ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.
ದಾಸಕೊಪ್ಪದಲ್ಲಿರುವ ಗ್ಯಾರೇಜ್ನಲ್ಲಿ ಜನರಲ್ ಸರ್ವಿಸ್ ಮಾಡಿಸಿಕೊಂಡು ಖಾಲಿ ವಾಹನವನ್ನು ಯಡೇಹಳ್ಳಿಗೆ ತರುತ್ತಿದ್ದಾಗ ಅಪಘಾತವಾಗಿದೆ. ವಾಹನದ ಮುಂಭಾಗ ಕೆರೆಯ ಕೆಸರಿನಲ್ಲಿ ಹೂತಿದ್ದು ಉಳಿದ ಭಾಗ ಕೆರೆಯ ಕಲ್ಲಿನ ಮೆಟ್ಟಿಲಿನ ಮೇಲೆ ನಿಂತಿದೆ.
ಟಿಪ್ಪರ್ ಅಪ್ಪಳಿಸಿದ ರಭಸಕ್ಕೆ ಕೆರೆಯ ಕಡೆ ವಾಹನ ಬೀಳದಂತೆ ಅಳವಡಿಸಲಾದ ಕಬ್ಬಿಣದ ಬ್ಯಾರೀಕೇಡ್ ಮುರಿದು ಹೋಗಿವೆ. ಸುದ್ದಿ ತಿಳಿಯುತ್ತಿದ್ದಂತೆ ಆನಂದಪುರ, ಯಡೇಹಳ್ಳಿ ಮತ್ತು ದಾಸಕೊಪ್ಪ ಭಾಗದ ನೂರಾರು ಜನರು ವೀಕ್ಷಿಸಲು ಆಗಮಿಸಿ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಆನಂದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ – ಮದುವೆ ಮನೆಯಲ್ಲಿ ಊಟ ಮಾಡಿದವರಿಗೆ ವಾಂತಿ, ಭೇದಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





