SHIVAMOGGA LIVE NEWS | SANDAL | 09 ಮೇ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶ್ರೀಗಂಧದ ಮರದ ತುಂಡುಗಳನ್ನು ಬೈಕ್’ನಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆ.ಜಿ.ಗಟ್ಟಲೆ ಶ್ರೀಗಂಧದ ತುಂಡುಗಳ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ತಾಲೂಕಿನ ಚಿಕ್ಕ ಜಂಬೂರು ಗ್ರಾಮದ ಮುಷ್ತಾಕ್ ಅಹಮದ್ (38) ಮತ್ತು ಫೀರ್ ಖಾನ್ (43) ಬಂಧಿತರು.
ಖಚಿತ ಮಾಹಿತಿ ಮೇಲೆ ದಾಳಿ
ಚಿಕ್ಕ ಜಂಬೂರು ಗ್ರಾಮದ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಶಿರಾಳಕೊಪ್ಪ ಕಾಡೆಗೆ ಸಾಗಣೆ ಮಾಡುತ್ತಿರುವ ಕುರಿತು ಶಿಕಾರಿಪುರ ಡಿವೈಎಸ್’ಪಿ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಈ ಕುರಿತು ಶಿರಾಳಕೊಪ್ಪ ಠಾಣೆ ಪಿಎಸ್ಐ ಅವರಿಗೆ ನಿರ್ದೇಶನ ನೀಡಿ ದಾಳಿ ನಡೆಸಲಾಯಿತು.
ಚಿಕ್ಕಜಂಬೂರು ಮತ್ತು ಕೋಡಿಕೊಪ್ಪ ಗ್ರಾಮದ ನಡುವೆ ಸೇತುವೆ ಬಳಿ ಬೈಕ್ ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ 17 ಕೆ.ಜಿ 660 ಗ್ರಾಂ ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ. ಇವುಗಳ ಮೌಲ್ಯ 60 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ಧ ಐಪಿಸಿ ಕಲಂ 379 ಮತ್ತು ಅರಣ್ಯ ಕಾಯ್ದೆ ರೀತಿ ಪ್ರಕರಣ ದಾಖಲು ಮಾಡಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ – ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ, ಜನರಲ್ಲಿ ಢವಢವ, ವಿಡಿಯೋ ವೈರಲ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






