SHIVAMOGGA LIVE NEWS | SANDAL | 09 ಮೇ 2022
ಶ್ರೀಗಂಧದ ಮರದ ತುಂಡುಗಳನ್ನು ಬೈಕ್’ನಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆ.ಜಿ.ಗಟ್ಟಲೆ ಶ್ರೀಗಂಧದ ತುಂಡುಗಳ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ತಾಲೂಕಿನ ಚಿಕ್ಕ ಜಂಬೂರು ಗ್ರಾಮದ ಮುಷ್ತಾಕ್ ಅಹಮದ್ (38) ಮತ್ತು ಫೀರ್ ಖಾನ್ (43) ಬಂಧಿತರು.
ಖಚಿತ ಮಾಹಿತಿ ಮೇಲೆ ದಾಳಿ
ಚಿಕ್ಕ ಜಂಬೂರು ಗ್ರಾಮದ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಶಿರಾಳಕೊಪ್ಪ ಕಾಡೆಗೆ ಸಾಗಣೆ ಮಾಡುತ್ತಿರುವ ಕುರಿತು ಶಿಕಾರಿಪುರ ಡಿವೈಎಸ್’ಪಿ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಈ ಕುರಿತು ಶಿರಾಳಕೊಪ್ಪ ಠಾಣೆ ಪಿಎಸ್ಐ ಅವರಿಗೆ ನಿರ್ದೇಶನ ನೀಡಿ ದಾಳಿ ನಡೆಸಲಾಯಿತು.
ಚಿಕ್ಕಜಂಬೂರು ಮತ್ತು ಕೋಡಿಕೊಪ್ಪ ಗ್ರಾಮದ ನಡುವೆ ಸೇತುವೆ ಬಳಿ ಬೈಕ್ ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ 17 ಕೆ.ಜಿ 660 ಗ್ರಾಂ ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ. ಇವುಗಳ ಮೌಲ್ಯ 60 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ಧ ಐಪಿಸಿ ಕಲಂ 379 ಮತ್ತು ಅರಣ್ಯ ಕಾಯ್ದೆ ರೀತಿ ಪ್ರಕರಣ ದಾಖಲು ಮಾಡಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ – ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ, ಜನರಲ್ಲಿ ಢವಢವ, ವಿಡಿಯೋ ವೈರಲ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200