ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SANDAL | 09 ಮೇ 2022
ಶ್ರೀಗಂಧದ ಮರದ ತುಂಡುಗಳನ್ನು ಬೈಕ್’ನಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆ.ಜಿ.ಗಟ್ಟಲೆ ಶ್ರೀಗಂಧದ ತುಂಡುಗಳ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರ ತಾಲೂಕಿನ ಚಿಕ್ಕ ಜಂಬೂರು ಗ್ರಾಮದ ಮುಷ್ತಾಕ್ ಅಹಮದ್ (38) ಮತ್ತು ಫೀರ್ ಖಾನ್ (43) ಬಂಧಿತರು.
ಖಚಿತ ಮಾಹಿತಿ ಮೇಲೆ ದಾಳಿ
ಚಿಕ್ಕ ಜಂಬೂರು ಗ್ರಾಮದ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಶಿರಾಳಕೊಪ್ಪ ಕಾಡೆಗೆ ಸಾಗಣೆ ಮಾಡುತ್ತಿರುವ ಕುರಿತು ಶಿಕಾರಿಪುರ ಡಿವೈಎಸ್’ಪಿ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಈ ಕುರಿತು ಶಿರಾಳಕೊಪ್ಪ ಠಾಣೆ ಪಿಎಸ್ಐ ಅವರಿಗೆ ನಿರ್ದೇಶನ ನೀಡಿ ದಾಳಿ ನಡೆಸಲಾಯಿತು.
ಚಿಕ್ಕಜಂಬೂರು ಮತ್ತು ಕೋಡಿಕೊಪ್ಪ ಗ್ರಾಮದ ನಡುವೆ ಸೇತುವೆ ಬಳಿ ಬೈಕ್ ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ 17 ಕೆ.ಜಿ 660 ಗ್ರಾಂ ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ. ಇವುಗಳ ಮೌಲ್ಯ 60 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ಧ ಐಪಿಸಿ ಕಲಂ 379 ಮತ್ತು ಅರಣ್ಯ ಕಾಯ್ದೆ ರೀತಿ ಪ್ರಕರಣ ದಾಖಲು ಮಾಡಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ – ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ, ಜನರಲ್ಲಿ ಢವಢವ, ವಿಡಿಯೋ ವೈರಲ್
LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















