SHIVAMOGGA LIVE NEWS | DEAD | 17 ಮೇ 2022
ಸಾಗರದ (SAGARA) ಗಣಪತಿ ಕೆರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತದೇಹ (DEAD) ಪತ್ತೆಯಾಗಿತ್ತು. ಮೃತ ಯುವತಿಯ ಗುರುತು ಪತ್ತೆಯಾಗಿದೆ.
ಸಾಗರ ಜಂಬಗಾರು ನಿವಾಸಿ ರಕ್ಷಿತಾ (16) ಎಂದು ಗುರುತಿಸಲಾಗಿದೆ. ಸಾಗರದ ಖಾಸಗಿ ಶಾಲೆಯಲ್ಲಿ ರಕ್ಷಿತಾ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಸೋಮವಾರ ಶಾಲೆಗೆ ಬಂದಿದ್ದ ರಕ್ಷಿತಾ ಮನೆ ಹಿಂತಿರುಗಿರಲಿಲ್ಲ.
ಎಲ್ಲೆಡೆ ಹುಡುಕಾಡಿದ ಪೋಷಕರು ರಾತ್ರಿ ಸಾಗರ ನಗರ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಗಣಪತಿ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.