ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | RAIN DISASTER | 19 ಮೇ 2022
ಧಾರಕಾರ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಬಡಾವಣೆಗಳ ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗು ಮಳೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು ಜಲಾವೃತಗೊಂಡಿವೆ. ಹಲವು ಕಡೆ ನೀರು ನುಗ್ಗಿದೆ.
ಶಾಲೆ ಗ್ರೌಂಡ್ ಜಲಾವೃತ
ಮಳೆ ನೀರು ಹೊರಗೆ ಹೋಗಲು ಅವಕಾಶ ಇಲ್ಲದೆ ಶಾಲೆಯೊಂದರ ಕ್ರೀಡಾಂಗಣ ಕೆರೆಯಂತಾಗಿದೆ. ಶಿವಮೊಗ್ಗದ ಮಂಡ್ಲಿ ಸರ್ಕಾರಿ ಶಾಲೆಯ ಕ್ರೀಡಾಂಗಣ ಕೆರೆಯಂತಾಗಿ ಪರಿವರ್ತನೆಯಾಗಿದೆ. ಶಾಲೆಗೆ ರಜೆ ಘೋಷಣೆ ಮಾಡಿರುವ ವಿಚಾರ ಗೊತ್ತಾಗದೆ ಬಂದ ಮಕ್ಕಳು, ಕಾಂಪೌಂಡ್ ಒಳಗೆ ಬರಲು ಬೆಚ್ಚಿಬಿದ್ದರು.

ರಸ್ತೆ ಮೇಲೆ ಹರಿದ ನೀರು
ವಿನೋಬನಗರದ 60 ಅಡಿ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಚರಂಡಿಗೆ ನೀರು ಹೋಗುವ ಬದಲು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ.
ತುಂಬಿ ಹರಿದ ಚಾನಲ್
ಶಿವಮೊಗ್ಗದ ವೆಂಕಟೇಶ ನಗರದಲ್ಲಿ ಚಾನಲ್ ತುಂಬಿ ಹರಿಯುತ್ತಿದೆ. ಭಾರಿ ಮಳೆಯಿಂದಾಗಿ ಚಾನಲ್’ನಲ್ಲಿ ಭರ್ತಿಯಾಗಿದ್ದು, ನೀರು ರಭಸವಾಗಿ ಹರಿಯುತ್ತಿದೆ. ಇದೆ ರೀತಿ ಮಳೆ ಮುಂದುವರೆದರೆ ಇಲ್ಲಿನ ಮನೆಗಳಿಗೆ ನೀರು ನುಗ್ಗುವ ಆತಂಕವಿದೆ. ಈಗಾಗಲೇ ಯುಜಿಡಿಗಳಲ್ಲಿ ನೀರು ರಿವರ್ಸ್ ಬರುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ರಸ್ತೆ ಮೇಲೆ ನಿಂತ ನೀರು
ಗೋಪಾಲಗೌಡ ಬಡಾವಣೆಯ ಕೆಲವು ರಸ್ತೆಗಳು ಜಲಾವೃತವಾಗಿವೆ. ರಸ್ತೆ ಮೇಲೆ ನೀರು ನಿಂತಿದೆ. ಬಡಾವಣೆ ಎ ಬ್ಲಾಕ್ ಮೇಲೆ ರಸ್ತೆ ಮೇಲೆ ನೀರು ನಿಂತಿದೆ. ಇನ್ನು, ಮಳೆ ರಭಸಕ್ಕೆ ಯುಜಿಡಿ ನೀರು ಮನೆಗಳ ಒಳಗೆ ನುಗ್ಗಿದೆ.
ಚರಂಡಿ ನೀರು ರಸ್ತೆಗೆ
ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆ ಹಿಂಭಾಗ ಹೊಸಮನೆ ಬಡಾವಣೆಯಲ್ಲಿ ಚರಂಡಿ ನೀರು ಉಕ್ಕಿ ರಸ್ತೆಯಲ್ಲಿ ಹರಿಯುತ್ತಿದೆ. ಸ್ಮಾರ್ಟ್ ಸಿಟಿ ಕಾಮಗಾರಿಯ ಬಳಿಕ ಈ ಸಮಸ್ಯೆ ಉದ್ಭವವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮನೆಗಳಿಗೆ ಚರಂಡಿ ನೀರು ಹರಿದು ಭೀತಿ ಉಂಟು ಮಾಡಿದೆ.
ಕೋರ್ಟ್ ಮುಂಭಾಗ ರಸ್ತೆ ಜಲಾವೃತ
ಶಿವಮೊಗ್ಗ ಕೋರ್ಟ್ ಮುಂಭಾಗ ಬಾಲರಾಜ ಅರಸ್ ರಸ್ತೆಯ ಒಂದು ಭಾಗ ಸಂಪೂರ್ಣ ಜಲಾವೃತವಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿ ಅಡಿ ಹೊಸ ಚರಂಡಿ ನಿರ್ಮಾಣ ಮಾಡಲಾಗಿದೆ. ಆದರೂ ನೀರು ಚರಂಡಿಗೆ ಹೋಗದೆ ರಸ್ತೆಯ ಮೇಲೆ ನಿಂತಿದೆ.
ರಸ್ತೆ ಮೇಲೆ ಮೊಣಕಾಲುದ್ದ ನೀರು
ಬಾಲರಾಜ ಅರಸ್ ರಸ್ತೆಯಿಂದ ಕಾಂಗ್ರೆಸ್ ಕಚೇರಿಗೆ ತರಳುವ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಈ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತಿದೆ. ನೀರು ಸರಾಗವಾಗಿ ಹರಿದು ಚರಂಡಿಗೆ ಹೋಗುವ ವ್ಯವಸ್ಥೆ ಇಲ್ಲದಿರುವುದೆ ಇದಕ್ಕೆ ಕಾರಣವಾಗಿದೆ.
ಇದನ್ನೂ ಓದಿ BREAKING NEWS | ಶಿವಮೊಗ್ಗದಲ್ಲಿ ಇವತ್ತು ರೆಡ್ ಅಲರ್ಟ್ ಘೋಷಣೆ
ರಾಜಾ ಕಾಲುವೆ ನೀರು ಮನೆಗೆ
ಚಾಲುಕ್ಯನಗರದಲ್ಲಿ ರಾಜಾ ಕಾಲುವೆ ನೀರು ಮನೆಗಳು, ಖಾಲಿ ಜಾಗಕ್ಕೆ ನುಗ್ಗಿದೆ. ಇಲ್ಲಿ ರಾಜಾ ಕಾಲುವೆ ಕಾಮಗಾರಿ ಸರಿಯಾಗಿ ಮಾಡದೆ ಇರುವುದರಿಂದ ನೀರು ಪಕ್ಕದ ಮನೆಗಳಿಗೆ ನುಗ್ಗಿದೆ. ಚೌಡೇಶ್ವರಿ ದೇವಸ್ಥಾನದ ಹಿಂಭಾಗದ ಖಾಸಗಿ ಶಾಲೆ ಆವರಣ, ಸಮುದಾಯ ಭವನದ ಆವರಣಕ್ಕೂ ರಾಜಾ ಕಾಲುವೆ ನೀರು ನುಗ್ಗಿದೆ.
ಮನೆಗಳಲ್ಲಿ ಕರೆಂಟ್ ಹೊಡೆಯುತ್ತಿದೆ
ಇತ್ತ ಟ್ಯಾಂಕ್ ಮೊಹಲ್ಲಾದ ವಿವಿಧೆಡೆಯು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದೆ. ಕೆಲವು ಮಗಳಲ್ಲಿ ಗ್ರೌಂಡಿಂಗ್ ಸಮಸ್ಯೆ ಉಂಟಾಗಿದೆ. ಮೆಸ್ಕಾಂಗೆ ಕರೆ ಮಾಡಿದರೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















