ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಅಯೋಗ್ಯ, ರೇವಣ್ಣ ಲೋಕೋಪಯೋಗಿ ಸಚಿವರಾಗಲು ಅಯೋಗ್ಯ ಅಂತಾ ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.
ಶಿವಮೊಗ್ಗದಲ್ಲಿ ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ಟೀಕಿಸಿದ್ದು, ಸುಮಲತಾ ಐಟಿ ದಾಳಿ ಮಾಡಿಸುವಷ್ಟು ಶಕ್ತರಾಗಿದ್ದಾರೆ ಅಂತಾ ಅಂದುಕೊಂಡಿದ್ದಾರೆ. ಹಾಗಾಗಿ ಕುಮಾರಸ್ವಾಮಿ ಅವರು ಸಿಎಂ ಆಗಲು ಅಯೋಗ್ಯರು ಅಂತಾ ಲೇವಡಿ ಮಾಡಿದ್ದಾರೆ. ಇದೇ ವೇಳೆ, ಬೆಳಗ್ಗೆ ಶಾಸಕ ಈಶ್ವರಪ್ಪ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಕೂಡ, ಸಿಎಂ ವಿರುದ್ಧ ಗರಂ ಆಗಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]