SHIVAMOGGA LIVE NEWS | RAID | 30 ಮೇ 2022
ಕಟ್ಟಡ ಪರವಾನಗಿ ನವೀಕರಣಕ್ಕೆ ಬಂದವರ ಬಳಿ ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಡಾಟಾ ಎಂಟ್ರಿ ಆಪರೇಟರ್ ಒಬ್ಬ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಮಹಾನಗರ ಪಾಲಿಕೆಯ ಕಟ್ಟಡ ಪರವಾನಗಿ ವಿಭಾಗದ ಡಾಟಾ ಎಂಟ್ರಿ ಆಪರೇಟರ್ ವಿಜಯ್ ಕುಮಾರ್, ಎಸಿಬಿ ಬಲೆಗೆ ಬಿದ್ದಿದ್ದಾನೆ.
ವಿನೋಬನಗರದ ನಿವಾಸಿಯೊಬ್ಬರು ತಮ್ಮ ಪರಿಚಯಸ್ಥರ ಕಟ್ಟಡದ ಪರವಾನಗಿ ಪಡೆದಿದ್ದರು. 2022ನೇ ಫೆಬ್ರವರಿ ಸಾಲಿನಲ್ಲಿ ಪರವಾನಗಿ ಅಂತ್ಯವಾಗಿತ್ತು. ಇದರ ನವೀಕರಣಕ್ಕೆ ಬಂದಿದ್ದು, ಪಾಲಿಕೆಯಲ್ಲಿ ಅಗತ್ಯ ಶುಲ್ಕ ಪಾವತಿಸಿದ್ದರು.
ರಶೀದಿಯನ್ನು ಡಾಟಾ ಎಂಟ್ರಿ ಆಪರೇಟರ್ ವಿಜಯ್ ಕುಮಾರ್’ಗೆ ತಂದು ಕೊಟ್ಟು ಉಳಿದ ಕೆಲಸ ಮಾಡಿಕೊಡುವಂತೆ ಮನವಿ ಮಾಡಿದ್ದರು. ಆದರೆ ವಿಜಯ್ ಕುಮಾರ್ 6 ಸಾವಿರ ರೂ. ಲಂಚದ ಹಣಕ್ಕೆ ಡಿಮಾಂಡ್ ಮಾಡಿದ್ದಾನೆ.
ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಎಸಿಬಿಗೆ ದೂರು ನೀಡಲಾಗಿತ್ತು. ಇವತ್ತು ಲಂಚದ ಹಣ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ವಿಜಯ್ ಕುಮಾರ್’ನನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಅವಘಡ, ಕಾರ್ಮಿಕ ಸಾವು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200