ರಾಜ್ಯಸಭೆ, ಎಂಎಲ್’ಸಿ ಟಿಕೆಟ್ ನಿರಾಕರಿಸಿದ ಭದ್ರಾವತಿ ಮೂಲದ ಯುವ ಮುಖಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | YOUTH | 30 ಮೇ 2022

ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಹಲವರು ಮುನಿಸಿಕೊಳ್ಳುತ್ತಾರೆ, ಪಕ್ಷವನ್ನೇ ತೊರೆಯುತ್ತಾರೆ. ಆದರೆ ಭದ್ರಾವತಿ ಮೂಲದ ಯುವ ನಾಯಕನೊಬ್ಬ ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಇವರ ನಡೆ ಕಾಂಗ್ರೆಸ್ ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದೆ.

‘ಈಗ ಕೆಲಸ ಮಾಡುವುದಿದೆ’

ಬಿ.ವಿ.ಶ್ರೀನಿವಾಸ್ ಅವರಿಗೆ ಕರ್ನಾಟಕದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. ಇದನ್ನು ಅವರು ನಿರಾಕರಿಸಿದ್ದರು. ಈಗ ರಾಜ್ಯಸಭೆಗೆ ಸ್ಪರ್ಧೆ ಮಾಡುವಂತೆಯು ಪಕ್ಷ ತಿಳಿಸಿತು. ಆದರೆ ಬಿ.ವಿ.ಶ್ರೀನಿವಾಸ್ ಅವರು ನಿರಾಕರಿಸಿದ್ದಾರೆ.

ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಹುಲ್ ಗಾಂಧಿ ಅವರು ಪಕ್ಷ ಸಂಘಟನೆಗೆ ಈಗಾಗಲೆ ಒಂದು ಜವಾಬ್ದಾರಿ ನೀಡಿದ್ದಾರೆ. ಕರ್ನಾಟಕದಿಂದ ಯುವ ಕಾಂಗ್ರೆಸ್’ನ ಮೊದಲ ಅಧ್ಯಕ್ಷನಾಗಿದ್ದೇನೆ. ಸಾಕಷ್ಟು ಜವಾಬ್ದಾರಿ ಇದೆ. ಎರಡು ಜವಾಬ್ದಾರಿಗಳನ್ನು ನಿಭಾಯಿಸಲು ಸಮಯದ ಅಭಾವ ಉಂಟಾಗಲಿದೆ. ಪಕ್ಷದಲ್ಲಿ ಇನ್ನೂ ಹಲವು ನಾಯಕರಿದ್ದಾರೆ. ಅವರಿಗೆ ಅವಕಾಶ ಕೊಡಲಿ’ ಎಂದರು.

ಅಧಿಕಾರಕ್ಕಾಗಿ ಪಕ್ಷ ಸೇರಿದ್ದಲ್ಲ

‘ಸಂಸದ, ಶಾಸಕನಾಗಬೇಕು ಎಂದು ಕಾಂಗ್ರೆಸ್ ಪಕ್ಷಕ್ಕೆ ಬಂದವನಲ್ಲ. ಈ ಪಕ್ಷದ ಸಿದ್ಧಾಂತ ಮೆಚ್ಚಿಕೊಂಡು ಬಂದಿದ್ದೇವೆ. ಈಗಾಗಲೆ ರಾಹುಲ್ ಗಾಂಧಿಯವರು ಒಂದು ಹುದ್ದೆ ನೀಡಿದ್ದಾರೆ. ಅದನ್ನು ನಿರ್ವಹಿಸುತ್ತಿದ್ದೇನೆ. ಈಗ ಹೆಚ್ಚು ಕೆಲಸವಿದೆ. ಸಮಯ ಕಡಿಮೆ ಇದೆ. ಬೇರೆಯವರಿಗೆ ಅವಕಾಶವಾಗಲಿ ಎಂದು ನಾನು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಟಿಕೆಟ್ ನಿರಾಕರಿಸಿದೆ’ ಎಂದು ತಿಳಿಸಿದರು.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರ ನಡೆ ಪಕ್ಷದೊಳಗೆ ಹಲವರನ್ನು ಆಶ್ಚರ್ಯಗೊಳಿಸಿದೆ. ಹೈಕಮಾಂಡ್ ಬೆಂಬಲವಿತ್ತು, ರಾಜ್ಯದಲ್ಲಿಯು ಶ್ರೀನಿವಾಸ್ ಅವರ ಸ್ಪರ್ಧೆಗೆ ವಿರೋಧವಿರಲಿಲ್ಲ. ಹೀಗಿದ್ದೂ ಪಕ್ಷದ ಸಂಘಟನೆಗಾಗಿ ಅವರು ಟಿಕೆಟ್ ನಿರಾಕರಿಸಿದ್ದಾರೆ.

Shimoga Nanjappa Hospital

 ಇದನ್ನೂ ಓದಿ – ಮೊದಲ ಪ್ರಯತ್ನದಲ್ಲೇ UPSC ಪರೀಕ್ಷೆ ಪಾಸಾದ ಶಿವಮೊಗ್ಗದ ವೈದ್ಯ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment