ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | AGUMBE | 1 ಜೂನ್ 2022
ಮರ ಧರೆಗುರುಳಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿದ್ದಾರೆ.
ಆಗುಂಬೆ ಘಾಟಿಯ ಮೂರನೆ ತಿರುವಿನಲ್ಲಿ ಇವತ್ತು ಬೆಳಗ್ಗೆ ಮರವೊಂದು ಧರೆಗುರುಳಿತ್ತು. ಅದೃಷ್ಟವಶಾತ್ ಯಾವುದೆ ಅಪಾಯ ಸಂಭವಿಸಿಲ್ಲ.
ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಡ್ಡಲಾಗಿ ಬಿದ್ದಿದ್ದ ಮರದ ಕೆಳಗೆ ಸ್ವಲ್ಪ ಜಾಗವಿದ್ದಿದ್ದರಿಂದ ಕಾರುಗಳು, ಬೈಕುಗಳು ಸಂಚರಿಸಿದವು.
ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ, ಮರವನ್ನು ಕತ್ತರಿಸಿದರು. ಆ ಬಳಿಕ ವಾಹನ ಸಂಚಾರ ಪುನಾರಂಭವಾಯಿತು.
ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ಜೋರು ಮಳೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















