ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SAGARA | 4 ಜೂನ್ 2022
ಶಾಸಕ ಹರತಾಳು ಹಾಲಪ್ಪ ಅವರು ಇವತ್ತು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಆಕ್ರೋಶ ವ್ಯಕ್ತಪಡಿಸಿದರು.
ಇವತ್ತು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ನಗರಸಭೆಗೆ ದಿಢೀರ್ ಭೇಟಿ ನೀಡಿದ್ದರು. ಜನರ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಣೆಯಾದ ಕಡತ ದಿಢೀರ್ ಪ್ರತ್ಯಕ್ಷ
ನಾಗರಾಜ್ ಎಂಬುವವರು ನಗರಸಭೆ ಅಧಿಕಾರಿಗಳು ತಮ್ಮನ್ನು ಸತಾಯಿಸುತ್ತಿರುವ ಕುರಿತು ಅಳಲು ತೋಡಿಕೊಂಡರು. ಖಾತೆ ಬದಲಾವಣೆ ಸಂಬಂಧದ ಕಡತವನ್ನು ನಾಗರಾಜ್ ಅವರು ನಗರಸಭೆ ಕಂದಾಯ ವಿಭಾಗದ ಅಧಿಕಾರಿಯೊಬ್ಬರಿಗೆ ನೀಡಿದ್ದರು. ಆ ಬಳಿಕ ಹಲವು ಭಾರಿ ಬಂದರೂ ಕಡತ ಕಾಣೆಯಾಗಿದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದರು. ಶಾಸಕರ ಬಳಿ ನಾಗರಾಜ್ ಅವರು ಈ ವಿಚಾರ ತಿಳಿಸುತ್ತಿದ್ದಂತೆ ಅಧಿಕಾರಿ ಕಡತ ತಂದು ಕೊಟ್ಟರು.
ಹೆಚ್ಚುವರಿ ಸ್ಕ್ಯಾನರ್ ಖರೀದಿಗೆ ಸೂಚನೆ
ಇನ್ನು, ನಗರಸಭೆಯಲ್ಲಿ ಈ – ಸ್ವತ್ತು ನೀಡುವಲ್ಲಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಪೌರಾಯುಕ್ತರಿಂದ ಮಾಹಿತಿ ಪಡೆದ ಶಾಸಕ ಹರತಾಳು ಹಾಲಪ್ಪ ಅವರು, ಅಗತ್ಯವಿದ್ದರೆ ಹೆಚ್ಚುವರಿ ಸ್ಕ್ಯಾನರ್ ಖರೀದಿಗೆ ಸೂಚನೆ ನೀಡಿದರು.
ಗುತ್ತಿಗೆದಾರರಿಗೆ ನೊಟೀಸ್ ನೀಡಲು ಸೂಚನೆ
ಮತ್ತೊಂದೆಡೆ ನಗರ ಸಭೆ ವ್ಯಾಪ್ತಿಯಲ್ಲಿ 8 ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ವಿಳಂಬ ಮಾಡಲಾಗುತ್ತಿದೆ. ಈ ಕುರಿತ ಶಾಸಕ ಹಾಲಪ್ಪ ಅವರು ಪರಿಶೀಲನೆ ನಡೆಸಿದರು. ಕಾಮಗಾರಿ ವಿಳಂಬಕ್ಕೆ ಕಾರಣವಾದ ಇಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ನೊಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ನಗರಸಭೆಯಲ್ಲಿ ಕೆಲಸಗಳು ವಿಳಂಬವಾಗುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಹಲವು ಲೋಪ ಕಂಡು ಬಂದಿದೆ. ಸಮರ್ಪಕ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟು ಸೂಚನೆ ನೀಡಲಾಗಿದೆ. ಇನ್ನು, ಸಾರ್ವಜನಿಕರು ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ನಗರ ಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಪೌರಾಯುಕ್ತ ರಾಜು ಡಿ.ಬಣಕಾರ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಇದನ್ನೂ ಓದಿ – ಕೆಲಸದಲ್ಲಿ ವಿಳಂಬ, ನಿರ್ಲಕ್ಷ್ಯ, ಅಧಿಕಾರಿಗಳ ವಿರುದ್ಧ ದೂರು ನೀಡಲು ಲೋಕಾಯುಕ್ತದಿಂದ ಕುಂದು ಕೊರತೆ ಸಭೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















