ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | FACILITY | 5 ಜೂನ್ 2022
ಸೊರಬ ಮುಖ್ಯರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ನಾಮದೇವ ಗಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚರಂಡಿ ವಿರುದ್ಧ ಜನಾಕ್ರೋಶಕ್ಕೆ ಕಾರಣ
ಕಾರಣ 1 – ಸುಮಾರು ಒಂದು ಕಿ.ಮೀ. ವ್ಯಾಪ್ತಿಯ ಕೊಳಚೆ ನೀರು ನಾಮದೇವ ಗಲ್ಲಿ ಚರಂಡಿಗೆ ಹರಿಸಲು ಯೋಜಿಸಲಾಗಿದೆ. ಹೊಟೇಲ್ ತ್ಯಾಜ್ಯವು ಇದರಲ್ಲಿ ಬರಲಿದೆ. ಈಗಾಗಲೆ ಎರಡು ಹೊಟೇಲ್ ತ್ಯಾಜ್ಯದಿಂದಲೇ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಎಲ್ಲೆಡೆಯ ಕೊಳಚೆ ಬಂದರೆ ಜನರಿಗೆ ಸಮಸ್ಯೆ ಉಂಟಾಗಲಿದೆ.
ಕಾರಣ 2 – ನಾಮದೇವ ಗಲ್ಲಿ ಸುತ್ತಲು ಅನೇಕ ಮಠ, ಮಂದಿರಗಳಿವೆ. ಶಿಕ್ಷಣ ಸಂಸ್ಥೆಗಳಿವೆ. ನಿತ್ಯ ನೂರಾರು ಜನರು ಇಲ್ಲಿ ಓಡಾಡುತ್ತಾರೆ. ಎಲ್ಲರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ.
ಕಾರಣ 3 – ನಾಮದೇವ ಗಲ್ಲಿ ಜನವಸತಿ ಪ್ರದೇಶವಾಗಿದೆ. ಕೊಳಚೆ ನೀರಿನ ದುರ್ವಾಸನೆಯಿಂದ ಜನರ ಬದುಕು ದುಸ್ತರವಾಗಲಿದೆ.
ಪುರಸಭೆಯಲ್ಲಿ ಚರ್ಚೆಗೆ ನಿರ್ಧಾರ
ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಅವರು, ಚರಂಡಿ ಸಮಸ್ಯೆ ಕುರಿತು ಪುರಸಭೆಯ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದ ಪ್ರತಿಭಟನಾಕಾರರನ್ನು ಸಮಾಧನಪಡಿಸಲು ಮುಂದಾದರು.
ಪಿಡಬ್ಲುಡಿ ಸಹಾಯಕ ಇಂಜಿನಿಯರ್ ನಾಗರಾಜ್ ಅವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಸದಸ್ಯ ಡಿ.ಎಸ್.ಪ್ರಸನ್ನ ಕುಮಾರ ದೊಡ್ಮನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸ್ಥಳೀಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ನಗರಸಭೆಗೆ ಶಾಸಕರ ದಿಢೀರ್ ಭೇಟಿ, ಕಾಣೆಯಾದ ಫೈಲ್ ಪ್ರತ್ಯಕ್ಷ, ಅಧಿಕಾರಿಗಳಿಗೆ ಕ್ಲಾಸ್
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

About The Editor
ನಿತಿನ್ ಆರ್.ಕೈದೊಟ್ಲು
















