ಕುವೆಂಪು ವಿವಿ ಎಡವಟ್ಟು, ಗೊಂದಲದಲ್ಲಿ ವಿದ್ಯಾರ್ಥಿಗಳು, ಏನಿದು ಸಮಸ್ಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 29 ಜೂನ್ 2022

ತರಗತಿಗಳು ಆರಂಭವಾಗಿ ವಾರ ಕಳೆದರೂ ಕನ್ನಡ ಪಠ್ಯಪುಸ್ತಕ (BOOKS) ಕೈಸೇರದೆ ಪದವಿ ವಿದ್ಯಾರ್ಥಿಗಳು ಮತ್ತೆ ಸಂಕಷ್ಟಕ್ಕಿಡಾಗಿದ್ದಾರೆ. ಪಠ್ಯ ಪುಸ್ತಕವಿಲ್ಲದೆ ಮೊದಲ ಸೆಮಿಸ್ಟರ್ ಕಳೆದಿದ್ದ ವಿದ್ಯಾರ್ಥಿಗಳು, ಈಗ ಎರಡನೇ ಮತ್ತು ನಾಲ್ಕನೆ ಸೆಮಿಸ್ಟರ್ ಕೂಡ ಪಠ್ಯವಿಲ್ಲದೆ ಪರೀಕ್ಷೆ ಬರೆಯಬೇಕಾದ ಆತಂಕಕ್ಕೀಡಾಗಿದ್ದಾರೆ. ಇಷ್ಟಾದರೂ ಕುವೆಂಪು ವಿಶ್ವವಿದ್ಯಾಲಯ ಮಾತ್ರ ಮೌನಕ್ಕೆ ಶರಣಾಗಿದೆ.

Shimoga Nanjappa Hospital

ಡಿಗ್ರಿ ಎರಡು ಹಾಗೂ ನಾಲ್ಕನೇ ಸೆಮಿಸ್ಟರ್ ಆರಂಭವಾಗಿ ವಾರ ಕಳೆದಿದೆ. ಆದರೆ ಪಠ್ಯಪುಸ್ತಕ ಕೈಸೇರಿಲ್ಲ, ಪ್ರಾಧ್ಯಾಪಕರಿಗೂ ಪರಿವಿಡಿ ಬಿಟ್ಟು ಪಠ್ಯಕ್ರಮ ಸಿಕ್ಕಿಲ್ಲ. ವಿದ್ಯಾರ್ಥಿಗಳಿಗೆ ಏನು ಪಾಠ ಮಾಡಬೇಕೆಂಬ ಗೊಂದಲದಲ್ಲಿ ಉಪನ್ಯಾಸಕರು ಸಿಲುಕಿದ್ದಾರೆ.

ಗೊಂದಲಕ್ಕೆ ಕಾರಣವೇನು?

ನ್ಯಾಶನಲ್ ಎಜುಕೇಶನ್ ಪಾಲಿಸಿ ಜಾರಿಗೆ ತರಲು ಕುವೆಂಪು ವಿವಿ ಉತ್ಸುಕತೆ ತೋರಿ ಶೈಕ್ಷಣಿಕ ವರ್ಷ ಜಾರಿ ಮಾಡಿತ್ತು. ಡಿಗ್ರಿ ಮೊದಲ ಸೆಮಿಸ್ಟರ್‌ನಲ್ಲಿ ಕನ್ನಡ ಪಠ್ಯಪುಸ್ತಕ ಪೂರೈಸಲು ಆಗದೆ ವಿದ್ಯಾರ್ಥಿಗಳಿಗೆ ಪಿಡಿಎಫ್ ಕಾಪಿ ಮಾತ್ರ ಪೂರೈಸಿತ್ತು. ಪಠ್ಯಪುಸ್ತಕ (BOOKS) ಮುದ್ರಣ ಜವಾಬ್ದಾರಿ ಪ್ರಸಾರಂಗಕ್ಕೆ ನೀಡಲಾಗಿತ್ತು. ಪಠ್ಯಕ್ರಮ ತಡೆ, ಟೆಂಡರ್ ನಿಧಾನ ಇತರೆ ಕಾರಣ ನೀಡಿ ಬಿಎ, ಬಿಎಸ್ಸಿ, ಬಿ.ಕಾಂಗೆ ತಲಾ ಸಾವಿರ ಪುಸ್ತಕ ನೀಡಲು ಮುದ್ರಣ ಮಾಡಿಸಲಾಗಿತ್ತು. ಪರೀಕ್ಷೆ ಮುಗಿದ ಮೇಲೆ ಪಠ್ಯಪುಸ್ತಕಗಳು ಕೈಸೇರಿದ್ದವು. ಈಗ ಅಂತದ್ದೇ ಎಡವಟ್ಟಿಗೆ ಕುವೆಂಪು ವಿವಿ ಮತ್ತೆ ಮುಂದಾಗಿದೆ.

ಪಠ್ಯ ಮುದ್ರಣಕ್ಕೆ ಹೋಗಿಲ್ಲ

ಕಾಲೇಜು ಶುರುವಾಗಿ ವಾರ ಕಳೆದರೂ ಪಠ್ಯಪುಸ್ತಕ ಮುದ್ರಣಕ್ಕೆ ಹೋಗಿಲ್ಲ. ಪಠ್ಯಪುಸ್ತಕ ಮುದ್ರಣ ಜವಾಬ್ದಾರಿ ಪ್ರತಿವರ್ಷ ಪ್ರಸಾರಾಂಗಕ್ಕೆ ನೀಡಲಾಗುತ್ತಿತ್ತು. ಅದಕ್ಕೂ ಮೊದಲು ಅಧ್ಯಾಪಕರ ವೇದಿಕೆ ಮಾಡುತ್ತಿತ್ತು. ಕಳೆದ ವರ್ಷದ ಗೊಂದಲ ಗಮನಿಸಿದ ಕನ್ನಡ ಅಧ್ಯಾಪಕರ ಸಂಘ, ಪಠ್ಯಪುಸ್ತಕ ಮುದ್ರಣ ಜವಾಬ್ದಾರಿಯನ್ನು ತಮಗೆ ನೀಡುವಂತೆ ಕುಲಪತಿ, ರಿಜಿಸ್ಟಾರ್ ಗೆ ಮನವಿ ಮಾಡಿತ್ತು. ಅಳೆದು ತೂಗಿ ಜೂ.22ರಂದು ಈಗ ಅಧ್ಯಾಪಕರ ವೇದಿಕೆಗೆ ಪುಸ್ತಕ ಮುದ್ರಣ ಜವಾಬ್ದಾರಿ ನೀಡಲಾಗಿದೆ.

ಈಗ ಸಂಘವು ವಿದ್ಯಾರ್ಥಿಗಳ ಸಂಖ್ಯೆ ಬೇಡಿಕೆ ಪಟ್ಟಿ ಮಾಡಿ ಟೆಂಡರ್ ಕರೆಯಬೇಕಿದೆ. ಅಲ್ಲಿಂದ ನಂತರ ಪಠ್ಯಪುಸ್ತಕ ಪೂರೈಸಬೇಕಿದೆ.

ಪರಿವಿಡಿಯದ್ದೇ ಗೊ೦ದಲ

ಕನ್ನಡ ಪಠ್ಯ ಪುಸ್ತಕದಲ್ಲಿ ಯಾವ ಪಠ್ಯಗಳು ಬರಲಿವೆ ಎಂಬ ಮಾಹಿತಿ ಪ್ರಾಧ್ಯಾಪಕರಿಗೆ ತಿಳಿಸಲಾಗಿದ್ದರೂ ಗೊಂದಲಗಳು ಇದ್ದಾವೆ. ಐಚ್ಛಿಕ ಕನ್ನಡದಲ್ಲಿ ನವೋದಯ ಪೂರ್ವ ಸಾಹಿತ್ಯ ಇದೆ ಎಂದು ತಿಳಿಸಲಾಗಿದ್ದರೂ ಯಾವುದಕ್ಕೆ ಆದ್ಯತೆ ಕೊಡಬೇಕು ಎಂದು ತಿಳಿಸಿಲ್ಲ. ಬಿಎಸ್ಸಿಯಲ್ಲಿ ಮಂಕುತಿಮ್ಮನ ಕಗ್ಗ ಇದ್ದು ಯಾವ ಕಗ್ಗ ಎಂದು ತಿಳಿಸಿಲ್ಲ. ಈ ಹಿಂದೆ ಬಿಸಿಎ ಎರಡನೇ ಸೆಮಿಸ್ಟರ್‌ನಲ್ಲಿ ಕುರುಡು ಕಾಂಚಾಣ ಪಠ್ಯ ಇತ್ತಾದರೂ ಈಗ ಅದನ್ನು ಕೈಬಿಡಲಾಗಿದೆ. ಹೀಗಾಗಿ ಅಧ್ಯಾಪಕರು ಗೊಂದಲಕ್ಕೀಡಾಗಿದ್ದಾರೆ.

ಕನ್ನಡ ಪ್ರಾಧ್ಯಾಪಕರಿಗೆ ಪಠ್ಯ ಪುಸ್ತಕ ಪಿಡಿಎಫ್ ಒದಗಿಸಲು ಪಠ್ಯಪುಸ್ತಕ ರಚನಾ ಸಮಿತಿ ಹಿಂದೇಟು ಹಾಕಿದೆ. ಪಿಡಿಎಫ್ ಕಳುಹಿಸಿದರೆ ದುರ್ಬಳಕೆಯಾಗಿ ವಿದ್ಯಾರ್ಥಿಗಳು ಜೆರಾಕ್ಸ್‌ ಮಾಡಿಸಿಕೊಂಡು ಪಠ್ಯ ಪುಸ್ತಕ ತೆಗೆದುಕೊಳ್ಳದೇ ಇರಬಹುದು ಎಂಬ ಕಾರಣಗಳನ್ನು ನೀಡಲಾಗಿದೆ. ಹಾಗಾಗಿ ಪಠ್ಯಪುಸ್ತಕ ವಿಚಾರದಲ್ಲಿ ಗೊಂದಲ ಮುಂದುವರೆದಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.

ವಾರದೊಳಗೆ ಪಠ್ಯ ಕೈಸೇರುವ ನಿರೀಕ್ಷೆ

ಕಳೆದ ಬಾರಿ ಪುಸ್ತಕ ಪೂರೈಸದೆ ಮೊದಲ ಸೆಮಿಸ್ಟರ್ ಮುಗಿಯಿತು. ವಿವಿ ಆಡಳಿತ ವರ್ಗದ ಗೊಂದಲದಿಂದ ಈ ಬಾರಿಯೂ ಅಂತದ್ದೇ ತಪ್ಪು ನಿರ್ಧಾರಗಳು ಆಗಬಾರದೆಂದು ಪಠ್ಯಪುಸ್ತಕ ಮುದ್ರಣ ಜವಾಬ್ದಾರಿಯನ್ನು ನಮಗೆ ನೀಡಲು ಕೇಳಿದೆವು. ಈಗ ನಮಗೆ ನೀಡಲಾಗಿದೆ. ವಾರದೊಳಗೆ ಪಠ್ಯಪುಸ್ತಕ ವಿದ್ಯಾರ್ಥಿಗಳ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಪ್ರಾಧ್ಯಾಪಕರ ವೇದಿಕೆ ಅಧ್ಯಕ್ಷ ಅಂಜನಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ – ಹೈಟೆಕ್ ಗೇಟಿಗೆ ಅಡ್ಡಿ ಅಂತಾ ನೆರಳು ನೀಡುತ್ತಿದ್ದ ಮರಗಳನ್ನೇ ಕತ್ತರಿಸಿ ಬಿಸಾಕಿದರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment