SHIVAMOGGA LIVE NEWS | SHIMOGA | 4 ಜುಲೈ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಳೆದ ಕೆಲ ದಿನದಿಂದ ಮಲೆನಾಡು (MALNAD) ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಇದರಿಂದ ತುಂಗಾ (TUNGA DAM) ನದಿ ಮೈದುಂಬಿ ಹರಿಯುತ್ತಿದೆ. ಗಾಜನೂರಿನ ತುಂಗಾ ಜಲಾಶಯದ ಆರು ಕ್ರಸ್ಟ್ ಗೇಟ್ ತೆಗೆದು ನೀರು ಹೊರಗೆ ಬಿಡಲಾಗುತ್ತಿದೆ.
.png)
ಪ್ರಸ್ತುತ ತುಂಗಾ ಜಲಾಶಯಕ್ಕೆ 17,910 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.
ತುಂಗಾ ಜಲಾಶಯ ಭರ್ತಿ
ಮೇ ತಿಂಗಳಲ್ಲಿ ಮಾನ್ಸೂನ್ ಚಂಡಮಾರುತದ ಪರಿಣಾಮ ಭಾರಿ ಮಳೆ ಸುರಿದಿತ್ತು. ಹಾಗಾಗಿ ತುಂಗಾ ಜಲಾಶಯದಲ್ಲಿ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಈಗ ಕಳೆದ ಮೂರು ದಿನದಿಂದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದೆ.
ಶನಿವಾರ ರಾತ್ರಿ 20 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಜಲಾಶಯ (TUNGA DAM) ಭರ್ತಿಯಾಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಭಾನುವಾರ ಬೆಳಗ್ಗೆ 17,300 ಕ್ಯೂಸೆಕ್ ಒಳ ಮತ್ತು ಹೊರ ಹರಿವು ಇತ್ತು.
ಮೈದುಂಬಿದ ತುಂಗೆ, ಕಣ್ತುಂಬಿಕೊಂಡ ಜನ
ಜಲಾಶಯದಿಂದ ನೀರು ಹೊರಗೆ ಹರಿಸುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗದಲ್ಲಿ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಿದೆ. ಹಾಗಾಗಿ ಜನರು ಸೇತುವೆಗಳ ಮೇಲೆ ನಿಂತು ಹೊಳೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಮೊಬೈಲ್ ಮೂಲ ಫೋಟೊ, ವಿಡಿಯೋ ಮಾಡಿಕೊಂಡು ಆಪ್ತರಿಗೆ ಕಳುಹಿಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚುರುಕು, ಯಡೂರು, ಆಗುಂಬೆಯಲ್ಲಿ ಹೆಚ್ಚು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






