ಶಿವಮೊಗ್ಗ ಲೈವ್.ಕಾಂ | 04 ಏಪ್ರಿಲ್ 2019
ಮೈತ್ರಿಕೂಟದ ಅಭ್ಯರ್ಥಿ, ಮಾಜಿ ಶಾಸಕ ಮಧು ಬಂಗಾರಪ್ಪ ಕುಟುಂಬವು 61.58 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿಯನು ಹೊಂದಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇದ್ದ 67 ಕೋಟಿ ರೂ. ಮೌಲ್ಯದ ಆಸ್ತಿಯಲ್ಲಿ 6 ಕೋಟಿ ರೂ. ಮೌಲ್ಯದ ಆಸ್ತಿ ಕರಗಿದೆ. ಇದರ ಜತೆಗೆ ಬ್ಯಾಂಕ್ ಮತ್ತು ಇತರೆ ಸಂಸ್ಥೆಗಳಲ್ಲಿನ ಸಾಲದ ಮೊತ್ತ 15ರಿಂದ 17 ಕೋಟಿ ರೂ.ಗಳಿಗೆ ಏರಿಕೆಯಾಗಿದ್ದು ಕೆಎಸ್ಐಐಡಿಸಿಯಲ್ಲಿ 43.61 ಲಕ್ಷ ರೂ. ಸಾಲದ ವ್ಯಾಜ್ಯ ಬಾಕಿ ಇದೆ.
2018-19ನೇ ಸಾಲಿನಲ್ಲಿ ಸಲ್ಲಿಸಿದ ಆದಾಯ ತೆರಿಗೆ ಪ್ರಕಾರ ಇವರ ಕುಟುಂಬದ ವಾರ್ಷಿಕ ಆದಾಯ 92.17 ಲಕ್ಷ ರೂ. ಇದೆ.
ಮಧು ಮತ್ತು ಅವರ ಪತ್ನಿ ಅನಿತಾ ಅವರು 19.88 ಕೋಟಿ ರೂ. ಮೌಲ್ಯದ ಚರಾಸ್ತಿ, ಮಧು ಮತ್ತು ಅವರ ಪುತ್ರ ಸೂರ್ಯ ಅವರು 41.58 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಅನಿತಾ ಮಧು ಬಂಗಾರಪ್ಪ ಅವರ ಹೆಸರಲ್ಲಿ ಸ್ಥಿರಾಸ್ತಿ ಇಲ್ಲ. ಬೆಂಗಳೂರು 25ನೇ ಎಸಿಎಂಎಂ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್’ಗೆ ಸಂಬಂಧಿಸಿದ ಪ್ರಕರಣವೊಂದನ್ನು ಎದುರಿಸುತ್ತಿದ್ದಾರೆ.

ಕುಟುಂಬದ ಬಳಿ 56 ಲಕ್ಷ ರೂ. ನಗದು, ಇತ್ತೀಚೆಗಷ್ಟೇ ಖರೀದಿಸಿದ ಹೊಸ ಕಾರು ಸೇರಿ ಎರಡು ಕಾರುಗಳು, 2.15ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳಿವೆ. ಮಧು ಅವರು ತಮ್ಮದೇ ಒಡೆತನದ ಆಕಾಶ್ ಆಡಿಯೋಗೆ 7.45 ಕೋಟಿ ರೂ. ಅಡ್ವಾನ್ಸ್ ನೀಡಿದ್ದರೆ, ಅವರ ಪತ್ನಿ ಅನಿತಾ ಅವರು ಪತಿಗೆ 8.75 ಕೋಟಿ ರೂ. ಅಡ್ವಾನ್ಸ್ ನೀಡಿದ್ದಾರೆ.
ಸೊರಬ ತಾಲೂಕು ತಲಗಡ್ಡೆಯಲ್ಲಿ 50 ಎಕರೆ, ಕೋಡಿಕೊಪ್ಪದಲ್ಲಿ 59 ಎಕರೆ, ಕುಬಟೂರಲ್ಲಿ 6 ಎಕರೆ, ಲಕ್ಕವಳ್ಳಿಯಲ್ಲಿ 35 ಎಕರೆ ಮತ್ತು ದೇವಸ್ಥಾನದ ಹಕ್ಕಲಲ್ಲಿ 2 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದಾರೆ. ಈ ಎಲ್ಲ ಆಸ್ತಿಗಳು ಮಧು ಬಂಗಾರಪ್ಪ ಮತ್ತು ಅವರ ಪುತ್ರ ಸೂರ್ಯನ ಹೆಸರಲ್ಲಿವೆ. ಬೆಂಗಳೂರು ಕುಮಾರಪಾರ್ಕ್’ನಲ್ಲಿ 6 ಕೋಟಿ ರೂ. ಮೌಲ್ಯದ ನಿವೇಶನ, ಆರ್.ಎಂ.ವಿ ಎಕ್ಸ್’ಟೆನ್ಷನ್, ಶಿವಮೊಗ್ಗ ಚನ್ನಪ್ಪ ಬಡಾವಣೆ, ಸೊರಬ ತಾಲೂಕು ಕುಬಟೂರಲ್ಲಿ ಮನೆಗಳನ್ನು ಹೊಂದಿದ್ದಾರೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು










