ತಾಳಗುಪ್ಪದಿಂದ ಮತ್ತೊಂದು ರೈಲಿನ ಭರವಸೆ ಕೊಟ್ಟರು ರಾಘವೇಂದ್ರ, ಪ್ರಚಾರದ ಮಧ್ಯೆ ಮಕ್ಕಳ ಜೊತೆ ಕಬ್ಬಡಿ ಆಡಿದ ಮಧು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 09 ಏಪ್ರಿಲ್ 2019

ಲೋಕಸಭೆ ಚುನಾವಣೆಗೆ ಹದಿನಾಲ್ಕು ದಿನವಷ್ಟೆ ಬಾಕಿ ಇದೆ. ಅಭ್ಯರ್ಥಿಗಳು ಪ್ರಚಾರವನ್ನು ಬಿರುಸುಗೊಳಿಸಿದ್ದಾರೆ. ಯಡಿಯೂರಪ್ಪ ತವರಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪ್ರಚಾರ ನಡೆಸಿದರೆ, ಮಧು ಬಂಗಾರಪ್ಪ ತವರಲ್ಲಿ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿರುಸಿನ ಕ್ಯಾಂಪೇನ್ ಮಾಡಿದರು.

ಹೇಗಿತ್ತು ರಾಘವೇಂದ್ರ ಕ್ಯಾಂಪೇನ್?

ಸೊರಬ ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಿರುಸಿನ ಪ್ರಚಾರ ನಡೆಸಿದರು. ಬೂತ್ ಮಟ್ಟದಲ್ಲಿ ಕ್ಯಾಂಪೇನ್ ಮಾಡಿ, ಪೇಜ್ ಪ್ರಮುಖರ ಸಭೆಯನ್ನು ನಡೆಸಿದರು.

56857661 821508928210529 3678143274272423936 n.jpg? nc cat=108& nc oc=AQkEp6hbY0XSdqEYvGh61MPosqJPSqGhyMVDNqzNWjLP iATJKnTDjOlWynSP MvTJbdI9fsVIkeYHtxR qxz18& nc ht=scontent.fixe1 1

ಸೊರಬ ತಾಲೂಕಿನ ಸೈದೂರು ಗ್ರಾಮದಲ್ಲಿ ಪೇಜ್ ಪ್ರಮುಖರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ರಾಘವೇಂದ್ರ, ತಾಳಗುಪ್ಪದಿಂದ ಸೊರಬ ಆನವಟ್ಟಿ ಮೂಲಕ ಹುಬ್ಬಳ್ಳಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ಯೋಜನೆಗೆ ಜಾರಿಗೊಳಿಸುವ ಭರವಸೆ ನೀಡಿದರು. ಇನ್ನು, ಸೊರಬದ ಬೆನ್ನೂರು ಸೇರಿದಂತೆ ವಿವಿಧೆಡೆ ಸಾಲು ಸಾಲು ಸಭೆಗಳನ್ನು ನಡೆಸಿದರು. ಶಾಸಕ ಕುಮಾರ್ ಬಂಗಾರಪ್ಪ ಈ ಸಂದರ್ಭ ಉಪಸ್ಥಿತರಿದ್ದರು.

ಮಳೆ ನಡುವೆ ಮಧು ಕ್ಯಾಂಪೇನ್

ಮತ್ತೊಂದೆಡೆ ಶಿಕಾರಿಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕ್ಯಾಂಪೇನ್ ಮಾಡಿದರು. ಹಿತ್ತಲ, ಕಲ್ಮನೆ, ಈಸೂರು, ಶಿಕಾರಿಪುರ ಪಟ್ಟಣ, ಹೊಸೂರು, ಮರವಳ್ಳಿ, ಮುದ್ದನಹಳ್ಳಿ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿದರು.

ಪ್ರಚಾರದ ನಡುವೆ, ಮುದ್ದನಹಳ್ಳಿಯಲ್ಲಿ ಮಕ್ಕಳ ಜೊತೆಗೆ ಕೆಲ ಹೊತ್ತು ಮಧು ಬಂಗಾರಪ್ಪ ಕಬ್ಬಡಿ ಆಡಿದರು. ಇನ್ನು, ಮರವಳ್ಳಿ ಬಳಿ ಪ್ರಚಾರ ನಡೆಸುತ್ತಿದ್ದಾಗ ಮಳೆ ಬಂತು. ಹಾಗಾಗಿ ರಸ್ತೆ ಪಕ್ಕದ ಟೀ ಅಂಗಡಿಗೆ ಹೋಗಿ, ಮಧು ಬಂಗಾರಪ್ಪ ಸ್ಥಳೀಯರೊಂದಿಗೆ ಕುಳಿತು ಟೀ ಕುಡಿದು ಚರ್ಚೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment