SHIVAMOGGA LIVE NEWS
SHIMOGA | ಇಸ್ಲಾಮಿಕ್ ಸ್ಟೇಟ್ (ಐಎಸ್ಐಎಸ್) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆ ಇಬ್ಬರು ಶಂಕಿತ (SUSPECT) ಉಗ್ರರನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗೆ ಶೋಧ ಕಾರ್ಯ ನಡೆಯುತ್ತಿದೆ. ಇದರಿಂದ ಮಲೆನಾಡು ಭಾಗದಲ್ಲಿ ಮತ್ತೆ ಉಗ್ರರ ಜಾಡಿನ ಕುರಿತು ಆತಂಕ ಮೂಡಿದೆ.
![]() |
ಶಂಕಿತ ಉಗ್ರರ ಬಂಧನ ಮತ್ತು ಆನಂತರ ಏನೇನೆಲ್ಲ ಬೆಳವಣಿಗೆಗಳಾಗಿವೆ. ಅದರ 10 ಪ್ರಮುಖ ಮಾಹಿತಿ ಇಲ್ಲಿದೆ.
ಬೆಳವಣಿಗೆ 1 ಆಗಸ್ಟ್ 15ರಂದು ಗಾಂಧಿ ಬಜಾರ್’ನಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ಚಾಕು ಇರಿತ ಪ್ರಕರಣದ ತನಿಖೆ ವೇಳೆ, ಶಿವಮೊಗ್ಗದಲ್ಲಿ ಶಂಕಿತ (SUSPECT) ಉಗ್ರರ ಕುರಿತು ಮಾಹಿತಿ ಲಭ್ಯ. ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಮಾಜ್ ಮುನೀರ್ ಅಹಮದ್ (22) ಮತ್ತು ಶಿವಮೊಗ್ಗದ ಸಿದ್ಧೇಶ್ವರ ನಗರದ ಸಯ್ಯದ್ ಯಾಸೀನ್ ಅಲಿಯಾಸ್ ಬೈಲ್ (21) ಬಂಧನ. ತೀರ್ಥಹಳ್ಳಿ ಗುಡ್ಡೆಕೊಪ್ಪದ ಶಾರೀಕ್’ಗಾಗಿ ಶೋಧ ಕಾರ್ಯ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು. ಬೆಳವಣಿಗೆ 2 ‘ನಿಷೇಧಿತ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಶಂಕೆ. ಭಯೋತ್ಪಾದನಾ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು. ಸ್ಪೋಟಕಗಳನ್ನು ಹೊಂದಿರುವ ಮತ್ತು ರಾಷ್ಟ್ರಧ್ವಜವನ್ನು ಸುಟ್ಟಿರುವ ಶಂಕೆ ಇದೆ’ ಎಂದು ಎಫ್ಐಆರ್ ದಾಖಲು. ಬೆಳವಣಿಗೆ 3 ಶಂಕಿತ ಉಗ್ರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಶಿವಮೊಗ್ಗ ಪೊಲೀಸರು. ಸೆ.29ರವರೆಗೆ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ.ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತರ ಬಂಧನ, ವಿಧಾನಸೌಧದಲ್ಲಿ ಗೃಹ ಸಚಿವರು ಹೇಳಿದ್ದೇನು?
ಬೆಳವಣಿಗೆ 8 ‘ಮಂಗಳೂರು ಗೋಡೆ ಬರಹ ಪ್ರಕರಣದಲ್ಲಿ ಶಾರೀಕ್ ಮತ್ತು ಮಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಬ್ಬರನ್ನು ಬಂಧಿಸಲಾಗಿತ್ತು. ಸುಮಾರು ಒಂದು ವರ್ಷ ಇವರಿಬ್ಬರು ಜೈಲಿನಲ್ಲಿದ್ದರು ಜಾಮೀನಿನ ಮೇಲೆ ಹೊರ ಬಂದಿದ್ದರು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಮಾಹಿತಿ ನೀಡಿದರು.ಕ್ಲಿಕ್ ಮಾಡಿ ಇದನ್ನೂ ಓದಿ | ಭಯೋತ್ಪಾದಕ ಸಂಘಟನೆ ಜೊತೆ ನಂಟು, ಶಿವಮೊಗ್ಗದಲ್ಲಿ ಶಂಕಿತರು ಅರೆಸ್ಟ್
ಬೆಳವಣಿಗೆ 9 ‘ತನ್ನ ಮಗ ಚೆನ್ನಾಗಿ ಓದುತ್ತಿದ್ದ. ಇಂಜಿನಿಯರಿಂಗ್ ಮಾಡಿದ್ದಾನೆ. ಆತನಿಗೆ ಯಾವುದೆ ಉಗ್ರ ಸಂಘಟನೆ ನಂಟು ಇಲ್ಲ. ತಮ್ಮ ಮನೆ ಸುತ್ತಮುತ್ತಲು ಎಲ್ಲರೊಂದಿಗೂ ಚನ್ನಾಗಿ ಬೆರೆಯುತ್ತಿದ್ದ. ಯಾಸೀನ್ ಗೆ ಒಳ್ಳೆಯ ಸ್ನೇಹಿತರು ಇದ್ದರು. ಕಳೆದ 15 ದಿನದ ಹಿಂದೆ ಸ್ನೇಹಿತರೊಂದಿಗೆ ಟೂರ್’ಗೆ ಹೋಗುತ್ತಿದ್ದೇನೆ ಎಂದು ತಿಳಿಸಿ ಮನೆಯಿಂದ ಹೊರಟಿದ್ದ. ಈಗ ಪೊಲೀಸರು ಬಂಧಿಸಿದ್ದಾರೆ’ ಎಂದು ಯಾಸೀನ್ ತಂದೆ ಆಯುಬ್ ಖಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತರ ಬಂಧನ, ವಿಧಾನಸೌಧದಲ್ಲಿ ಗೃಹ ಸಚಿವರು ಹೇಳಿದ್ದೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200