SHIVAMOGGA LIVE NEWS
SHIKARIPURA | ಸಾಲಬಾಧೆಗೆ ಮನನೊಂದು ರೈತರೊಬ್ಬರು ಜಮೀನಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಇಚ್ಛೆಯಂತೆ ನೇತ್ರ ದಾನ (EYE DONATE) ಮಾಡಲಾಗಿದೆ.
ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಜಯ ನಾಯ್ಕ (44) ಮೃತ ರೈತ. ಜಮೀನಿನಲ್ಲಿ ಜಯ ನಾಯ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದಲ್ಲಿ ಜಯನಾಯ್ಕ ಅವರ ಪತ್ನಿ ಹೆಸರಿನಲ್ಲಿ 3.37 ಎಕರೆ ಜಮೀನಿದೆ. ಆತನ ಹೆಸರಿಗೆ ಒಂದು ಎಕರೆ ಜಮಿನಿತ್ತು. ಎರಡು ಜಮೀನಿನ ಮೇಲೆ ಸುಮಾರು 8 ಲಕ್ಷ ರೂ. ಸಾಲ ಪಡೆದಿದ್ದರು. ಈ ವರ್ಷ ಭಾರಿ ಮಳೆಯಿಂದಾಗಿ ಬೆಳೆನಷ್ಟ ಉಂಟಾಗಿತ್ತು. ಹಾಗಾಗಿ ಸಾಲ ತೀರಿಸಲಾಗಿದೆ ಮನನೊಂದು ಜಯನಾಯ್ಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಾಯಿ ಸೋಮ್ಲಿಬಾಯಿ ದೂರಿನಲ್ಲಿ ತಿಳಿಸಿದ್ದಾರೆ.
ನೇತ್ರ ದಾನ ಮಾಡಿದ ಕುಟುಂಬ (EYE DONATE)
ಜಯ ನಾಯ್ಕ ತನ್ನ ಸಾವಿನ ನಂತರ ನೇತ್ರದಾನ (EYE DONATE) ಮಾಡಬೇಕು ಅಂದುಕೊಂಡಿದ್ದರಂತೆ. ಹಾಗಾಗಿ ಅವರ ಸಾವಿನ ಬಳಿಕ ಕಣ್ಣುಗಳನ್ನು ದಾನ ಮಾಡಲಾಗಿದೆ. ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಣ್ಣುಗಳನ್ನು ದಾನ ಮಾಡಲಾಗಿದೆ.
ಆತ್ಮಹತ್ಯೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರೋರಾತ್ರಿ ಶಿವಮೊಗ್ಗ ಪೊಲೀಸರಿಂದ ಮನೆಗಳ ಮೇಲೆ ದಾಳಿ, ಸಂಘಟನೆಯ ಕಚೇರಿಗೆ ಬೀಗ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.