ಶಿವಮೊಗ್ಗ ಲೈವ್.ಕಾಂ | 10 ಏಪ್ರಿಲ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ಇದರ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇನೆ ಅಂತಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.
ಭದ್ರಾವತಿಯ ಜನ್ನಾಪುರದ ಜಯಶ್ರೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಮಾವೇಶದಲ್ಲಿ ರಾಘವೇಂದ್ರ ಮಾತನಾಡಿದರು. ಕಾರ್ಖಾನೆಯ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಕಳೆದ ಮೂರು ತಿಂಗಳಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಕಾರ್ಖಾನೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.
ವಿಐಎಸ್ಎಲ್ ಕಾರ್ಮಿಕರ ಮನೆಗಳ ನವೀಕರಣ, ಕಾರ್ಖಾನೆಗೆ ಅವಶ್ಯಕತೆ ಇರುವ ಕಚ್ಚಾ ವಸ್ತುಗಳ ಪೂರೈಕೆ, ರಮಣದುರ್ಗದಲ್ಲಿ ಗಣಿ ಮಂಜೂರು ಮಾಡಿಸಲಾಗಿದೆ. ಕಾರ್ಖಾನೆಯ ಇನ್ನುಳಿದ ಅಭಿವೃದ್ಧಿಗೆ ಸಂಬಂಧಿಸಿದ ಕಡತವನ್ನು ಶೀಘ್ರ ವಿಲೇವಾರಿ ಮಾಡಿಸಬೇಕಿದೆ ಅಂತಾ ರಾಘವೇಂದ್ರ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪ್ರಮುಖರಾದ ಪ್ರವೀಣ್ ಪಟೇಲ್, ವಿ.ಕದಿರೇಶ್, ಎಸ್ ದತ್ತಾತ್ರಿ, ಎಸ್ ಎಸ್ ಜ್ಯೋತಿ ಪ್ರಕಾಶ್, ಕೆ.ಎಸ್.ಭೈರಪ್ಪಗೌಡ, ನಾಗಭೂಷಣ್, ಜೆ.ಜಗದೀಶ್, ರಾಮಲಿಂಗಯ್ಯ, ವಿಶ್ವನಾಥ್ ರಾವ್ ಸೇರಿದಂತೆ ಹಲವರಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





